32.7 C
Udupi
Saturday, March 15, 2025
spot_img
spot_img
HomeBlogರಾಜ್ಯದಲ್ಲಿ ಮೇ 26 ಒಂದೇ ದಿನ 51 ಜನ ಅಪಘಾತಕ್ಕೆ ಬಲಿ: ಸಂಚಾರಿ ನಿಯಮ ಪಾಲನೆಗೆ...

ರಾಜ್ಯದಲ್ಲಿ ಮೇ 26 ಒಂದೇ ದಿನ 51 ಜನ ಅಪಘಾತಕ್ಕೆ ಬಲಿ: ಸಂಚಾರಿ ನಿಯಮ ಪಾಲನೆಗೆ ಮನವಿ ಮಾಡಿದ ಅಲೋಕ್ ಕುಮಾರ್

ಬೆಂಗಳೂರು: ಮೇ 26 ಭಾನುವಾರದಂದು ರಾಜ್ಯದಲ್ಲಿ ಒಂದೇ ದಿನ 51 ಜನ ಅಪಘಾತಕ್ಕೆ ಬಲಿಯಾಗಿದ್ದು, ಈ ಬಗ್ಗೆ ಸಂಚಾರ ಹಾಗೂ ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತೀವ್ರ ಕಳವಳ ವ್ಯಕ್ತಪಡಿಸಿ ಸಂಚಾರಿ ನಿಯಮ ಪಾಲಿಸುವಂತೆ ಜನತೆಗೆ ಮನವಿ ಮಾಡಿದ್ದಾರೆ.

ಕಳೆದ 24 ಗಂಟೆಯಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ 51 ಜನ ಸಾವಿಗೀಡಾಗಿದ್ದಾರೆ. ಸಂಚಾರಿ ನಿಯಮಗಳ ಉಲ್ಲಂಘನೆಯೇ ಅಪಘಾತಕ್ಕೆ ಕಾರಣವಾಗಿದ್ದು, ದಯವಿಟ್ಟು ಸಂಚಾರಿ ನಿಯಮ ಪಾಲಿಸಿ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಚಿಕ್ಕೋಡಿ, ಹಾಸನ, ಕಾರವಾರ, ರಾಮನಗರ ಸೇರಿ ರಾಜ್ಯದ ಹಲವೆಡೆ ಭಾನುವಾರ ಭಿಕರ ಅಪಘಾತಗಳು ನಡೆದಿದ್ದು ಬಹುತೇಕ ಅಪಘಾತಗಳಿಗೆ ಸಂಚಾರಿ ನಿಯಮಗಳ ಉಲ್ಲಂಘನೆಯೇ ಪ್ರಮುಖ ಕಾರಣ ಎಂದು ವರದಿಯಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page