
ಬೆಂಗಳೂರು : ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಪ್ರಸಾದ ತಯಾರಿಕೆಯಲ್ಲಿ ನಂದಿನಿ ತುಪ್ಪ ಬಳಸುವಂತೆ ಸರಕಾರ ಆದೇಶ ಹೊರಡಿಸಿದೆ.
ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಪತ್ತೆಯಾದ ಹಿನ್ನೆಲೆ ಈ ಆದೇಶ ಹೊರಡಿಸಲಾಗಿದೆ. ಇತರೆ ಕಂಪನಿಗಳ ಕಡಿಮೆ ದರದ ತುಪ್ಪಗಳನ್ನು ಬಳಸಿದಂತೆ ನಿಗಾ ವಹಿಸುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಇದರ ಹಿನ್ನೆಲೆ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪೂಜೆ ಮತ್ತು ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸಿ ಪ್ರಸಾದಗಳ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ನಿರ್ಧಾರ ಕೈಗೊಳ್ಳಲಾಗಿದ್ದು ಎಲ್ಲಾ ದೇವಸ್ಥಾನಗಳಿಗೆ ಅಧಿಸೂಚನೆ ನೀಡಲಾಗಿದೆ.













