22.8 C
Udupi
Monday, December 1, 2025
spot_img
spot_img
HomeBlogರೈತರಿಗಾಗಿ ರಾಷ್ಟ್ರೀಯ ಮಟ್ಟದಲ್ಲಿ ಬೃಹತ್ ಸಹಾಯವಾಣಿ ಕೇಂದ್ರ ಸ್ಥಾಪನೆ ಸಾಧ್ಯತೆ

ರೈತರಿಗಾಗಿ ರಾಷ್ಟ್ರೀಯ ಮಟ್ಟದಲ್ಲಿ ಬೃಹತ್ ಸಹಾಯವಾಣಿ ಕೇಂದ್ರ ಸ್ಥಾಪನೆ ಸಾಧ್ಯತೆ

ನವದೆಹಲಿ: ತನ್ನ ಹಲವಾರು ಯೋಜನೆಗಳ ಮೂಲಕ ರೈತರಿಗೆ ನೆರವಾಗುತ್ತಿರುವ ಕೇಂದ್ರ ಸರ್ಕಾರವು ಇದೀಗ ಮತ್ತೊಂದು ಮಹತ್ವದ ಕ್ರಮಕ್ಕೆ ಕಾಲಿಟ್ಟಿದ್ದು ಅದೇನಂದರೆ ಮುಂಬರುವ ವರ್ಷದಲ್ಲಿ ರೈತರಿಗಾಗಿ ರಾಷ್ಟ್ರೀಯ ಸಹಾಯವಾಣಿ ಸೇವೆ ಆರಂಭಿಸುವ ಸಾಧ್ಯತೆಯಿದ್ದು, ದೆಹಲಿ ಎನ್ಸಿಆರ್ ಪ್ರದೇಶದಲ್ಲಿ ಇದಕ್ಕಾಗಿ ಬೃಹತ್ ಕಾಲ್ ಸೆಂಟರ್ ಸ್ಥಾಪನೆಯಾಗಲಿದೆ.

ಇದು ಟೋಲ್ ಫ್ರೀ ಹೆಲ್ಪ್ ಲೈನ್ ಆಗಿರಲಿದ್ದು ದೇಶದ ಯಾವುದೇ ಮೂಲೆಯಿಂದಲಾದರೂ ಹೆಲ್ಪ್ ಲೈನ್ ಬರುವ ರೈತರ ಕರೆಗಳಿಗೆ ದಿನದ 24 ಗಂಟೆಯೂ ಸ್ಪಂದನೆ ಸಿಗಲಿದೆ.

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಕೃಷಿ ಸಚಿವರೂ ಆಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರ ಮಹತ್ವಾಕಾಂಕ್ಷಿ ಐಡಿಯಾ ಇದಾಗಿದ್ದು ಕೃಷಿ ಕ್ಷೇತ್ರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗೊಂಡಿರುವ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ, ಹಾಗೂ ಈ ಯೋಜನೆಗಳಲ್ಲಿ ರೈತರಿಗೆ ಏನಾದರೂ ಸಮಸ್ಯೆಗಳಿದ್ದಲ್ಲಿ ಅದನ್ನು ಪರಿಹರಿಸಲು ಸಹಾಯವಾಣಿ ರೂಪಿಸಲಾಗಿದೆ.

ಈ ಸಹಾಯವಾಣಿಯ ಸಂಖ್ಯೆಯನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ. 100 ಸೀಟರ್ಗಳ ಕಾಲ್ ಸೆಂಟರ್ ಸ್ಥಾಪನೆಯಾಗಲಿದ್ದು, ವಾರದ ಏಳೂ ದಿನ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಹಾಯವಾಣಿ ಚಾಲನೆಯಲ್ಲಿರುತ್ತದೆ. ದೇಶದ ಯಾವುದೇ ಮೂಲೆಯಿಂದಲಾದರೂ ಲ್ಯಾಂಡ್ಲೈನ್ ಮತ್ತು ಮೊಬೈಲ್ ನಂಬರ್ಗಳಿಂದ ಇದಕ್ಕೆ ಕರೆ ಮಾಡಬಹುದು. ಕನ್ನಡವೂ ಸೇರಿದಂತೆ 22 ಭಾಷೆಗಳಲ್ಲಿ ಸೇವೆ ಇರಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page