
ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಹತ್ವದ ನಿರ್ಧಾರವನ್ನು ಪೋಸ್ಟ್ ಮಾಡಿದ್ದು ಅದೇನೆಂದರೆ ವಯನಾಡು ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ತಿಳಿಸಿದ್ದಾರೆ.
ಪೋಸ್ಟ್ನಲ್ಲಿರುವ ಮುಖ್ಯಾಂಶ:
ವಯನಾಡಿನಲ್ಲಿ ಸಂಭವಿಸಿದ ದುರಂತ ಭೂಕುಸಿತದ ಬೆಳಕಿನಲ್ಲಿ, ಕರ್ನಾಟಕವು ಕೇರಳದೊಂದಿಗೆ ಒಗ್ಗಟ್ಟಿನಿಂದ ನಿಂತಿದೆ. ನಾನು ಕೇರಳ ಸಿಎಂ ಪಿಣರಾಯಿ ವಿಜಯನ್ ಜೊತೆ ಮಾತನಾಡಿ ಬೆಂಬಲ ವ್ಯಕ್ತಪಡಿಸಿದ್ದೇನೆ. ಕರ್ನಾಟಕವು ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿ ಕೊಡಲಿದೆ. ಒಟ್ಟಾಗಿ ನಾವು ಪುನರ್ ನಿರ್ಮಾಣ ಮಾಡುತ್ತೇವೆ ಮತ್ತು ಭರವಸೆಯನ್ನು ಪುನಃಸ್ಥಾಪಿಸುತ್ತೇವೆ ಎಂದು ಹೇಳಿದ್ದಾರೆ.











