25.2 C
Udupi
Friday, April 24, 2026
spot_img
spot_img
HomeBlogವಿದ್ಯಾಭಾರತಿ ಕರ್ನಾಟಕ ಜಿಲ್ಲಾ ಮಟ್ಟದ ಗುಂಪು ಆಟಗಳ ಸ್ಪರ್ಧ ಕಾರ್ಯಕ್ರಮ

ವಿದ್ಯಾಭಾರತಿ ಕರ್ನಾಟಕ ಜಿಲ್ಲಾ ಮಟ್ಟದ ಗುಂಪು ಆಟಗಳ ಸ್ಪರ್ಧ ಕಾರ್ಯಕ್ರಮ

ಶಿಕ್ಷಣದಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳು ಎರಡು ಸಮಾನವಾಗಿ ಅಳವಡಿಸಿಕೊಳ್ಳಬೇಕು. ಸಹಪಠ್ಯ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ಮಾನಸಿಕ ಸಾಮರ್ಥ್ಯ ಹೆಚ್ಚಳವಾಗುತ್ತದೆ. ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ತನ್ನ ಶೈಕ್ಷಣಿಕ ಸಂಯೋಜಿತ ಸಂಸ್ಥೆಗಳ ನಡುವೆ ನಡೆಸುವ ಇಂತಹ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ಮೂಡಿ ಬರಲಿ . ಇನ್ನೂ ಇಂತಹ ಹೆಚ್ಚು ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಲಿ. ಇದರಿಂದ ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಮಟ್ಟದವರೆಗೂ ತಮ್ಮ ಸಾಧನೆಯನ್ನು ಬೆಳೆಸಿಕೊಂಡು ಸಾಧಕರಾಗಿ ಮೂಡಿಬರಲಿ, ಸಂಸ್ಥೆಗೆ ಹೆಸರನ್ನು ತರಲಿ ಎಂದು ಅಮೃತ ಭಾರತಿ ಟ್ರಸ್ಟಿನ ಸದಸ್ಯರು ಶ್ರೀಯುತ ಸುಧೀರ್ ನಾಯಕ್ ನುಡಿದರು.

ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ವಸತಿ ನಿಲಯದ ಸಭಾಂಗಣದಲ್ಲಿ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಆಯೋಜಿಸುವ ಜಿಲ್ಲಾ ಮಟ್ಟದ ಗುಂಪು ಆಟಗಳ ಸ್ಪರ್ಧೆಯನ್ನು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಮಾತನಾಡಿದರು. ಅಮೃತ ಭಾರತಿ ಟ್ರಸ್ಟಿನ ಕಾರ್ಯದರ್ಶಿ ಗುರುದಾಸ ಶೆಣೈ , ಮತ್ತು ಅಮೃತ ಭಾರತಿ ವಿದ್ಯಾಲಯ ಆಡಳಿತ ಮಂಡಳಿಯ ಅಧ್ಯಕ್ಷರು ಶೈಲೇಶ್ ಕಿಣಿ , ಚದುರಂಗ ಕಾಯಿನ್ ಚಲಿಸುವುದರ ಮೂಲಕ ಸ್ಪರ್ಧೆಗೆ ಚಾಲನೆಯನ್ನು ನೀಡಿದರು . ಕಾರ್ಯಕ್ರಮದಲ್ಲಿ ಅಮೃತ ಭಾರತಿ ವಿದ್ಯಾ ಕೇಂದ್ರದ ಪ್ರಾಂಶುಪಾಲರು ಅರುಣ್ ಕುಮಾರ್ , ಮುಖ್ಯೋಪಾಧ್ಯಾಯಿನಿಯರು ಅನಿತಾ , ಅಪರ್ಣಾ , ಶಕುಂತಲಾ. ಜಿಲ್ಲಾ ಸಮಿತಿಯ ಶಾರೀರಿಕ ಪ್ರಮುಖ್ ವಿಜಯ ಕುಮಾರ್ ಶೆಟ್ಟಿ ,ಕ್ರೀಡಾಕೂಟ ಪ್ರಮುಖ್ ಉಷಾ ಶೆಟ್ಟಿ ಉಪಸ್ಥಿತರಿದ್ದರು. ಸೌಂದರ್ಯ ಯು.ಕೆ.ಕಾಪು , ಪಿಡೇ ಆರ್ಬಿಟರ್ , ರಾಹುಲ್ ಕಾಪು ,ಪಿಡೇ ಆರ್ಬಿಟರ್ ಸಹಾಯಕರು ಸ್ಪರ್ಧೆಯನ್ನು ನಡೆಸಿಕೊಟ್ಟರು. ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಗೆ ಸರಸ್ವತಿ ವಿದ್ಯಾಲಯ ಸಿದ್ದಾಪುರ, ಡುಯಲ್ ಸ್ಟಾರ್ ಶಾಲೆ ಅಮಾಸೆಬೈಲು , ಆನೆಗುಂದಿ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ ಕುತ್ಯಾರು , ಸೇವಾ ಸಂಗಮ ವಿದ್ಯಾ ಕೇಂದ್ರ ತೆಕ್ಕಟ್ಟೆ , ಅಮೃತ ಭಾರತಿ ವಿದ್ಯಾಲಯ ರಾಜ್ಯ ಪಠ್ಯಕ್ರಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗ , ಅಮೃತ ಭಾರತಿ ವಿದ್ಯಾ ಕೇಂದ್ರ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗ , ಅಮೃತ ಭಾರತಿ ಪದವಿ ಪೂರ್ವ ಕಾಲೇಜು ಸಂಸ್ಥೆಗಳು ಸ್ಪರ್ಧೆಯಲ್ಲಿ ಸ್ಪರ್ಧಿಸಿದ್ದರು. ಅಮೃತ ಭಾರತಿ ವಿದ್ಯಾಲಯದ ದೈಹಿಕ ಶಿಕ್ಷಣ ಶಿಕ್ಷಕರು ಪ್ರವೀಣ್ ಹೆಗ್ಡೆ , ನಿಶಾನ್ ಕುಮಾರ್ ಶೆಟ್ಟಿ , ವಿದ್ಯಾ ಕೇಂದ್ರ ಶಿಕ್ಷಕರು ರವೀಂದ್ರ ಶೆಟ್ಟಿ , ಅಮೃತ ಭಾರತಿ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕಿ ಪಾವನ ,ಡುಯಲ್ ಸ್ಟಾರ್ ಅಮಾಸ ಬೈಲು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಪೂರ್ಣಿಮಾ , ಸೇವಾ ಸಂಗಮ ವಿದ್ಯಾ ಕೇಂದ್ರ ತೆಕ್ಕಟ್ಟೆ ದೈಹಿಕ ಶಿಕ್ಷಣ ಶಿಕ್ಷಕರು ಸಂತೋಷ್ ಖಾರ್ವಿ‌ ಚದುರಂಗ ಸ್ಪರ್ಧೆಯ ನಿರ್ವಾಹಕರಾಗಿ ಜವಾಬ್ದಾರಿ ನಿರ್ವಹಿಸಿದರು. ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಕಾರ್ಯದರ್ಶಿ ಮಹೇಶ ಹೈಕಾಡಿ ಕಾರ್ಯಕ್ರಮವನ್ನು ನಿರೂಪಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page