
ಬೆಂಗಳೂರು: ಸ್ಪೀಕರ್ ಯು.ಟಿ.ಖಾದರ್ ವಿಧಾನಸಭೆಯಲ್ಲಿ ಶಾಸಕರ ಹಾಜರಾತಿ ಹೆಚ್ಚಿಸಲು ವಿಶ್ರಾಂತಿ ಮಾಡಲು ಹೊಸ ಐಡಿಯಾ ಮಾಡಿದ್ದು ಅದೇನೆಂದರೆ ಲಾಂಜ್ನಲ್ಲಿ ರಿಕ್ಲೈನರ್ ಚೇರ್ ಹಾಕಿಸಲು ಸೂಚಿಸಿದ್ದಾರೆ.
ಇಂದು ಸ್ಪೀಕರ್ ವಿಧಾನಸಭೆಯಲ್ಲಿ ಘೋಷಣೆ ಮಾಡಿ ತಿಂಡಿ, ಊಟ ವ್ಯವಸ್ಥೆ ಮಾಡಿದ್ವಿ. ಈಗ ಕೆಲ ಶಾಸಕರು ಊಟ ಮಾಡಿ ಮಲಗಲು ಎಲ್ಹೆಚ್ಗೆ ಹೋಗಿ ಬರುತ್ತೇವೆ ಅಂತೇಳಿ ಹೋಗ್ತಿದ್ದಾರೆ. ಕೆಲವರು ಬರುವುದೇ ಇಲ್ಲ. ಹಾಗಾಗಿ ಶಾಸಕರು ವಿಶ್ರಾಂತಿ ಮಾಡಲು ಲಾಂಜ್ನಲ್ಲಿ ರಿಕ್ಲೈನರ್ ಚೇರ್ ಹಾಕಿಸಿದ್ದೇವೆ. ಇಲ್ಲೇ ಮಲಗಿ, ಬೇಕಾದಾಗ ಕರೆಯುತ್ತೇವೆ ಎಂದು ಹೇಳಿದ್ದಾರೆ.








