
ಕಾರ್ಕಳ : ಶಿರ್ಲಾಲು ಗ್ರಾಮದ ಮುಗೆರ್ಕಳ ಸಮೀಪದ ಉಬ್ಬರಬೈಲು ಎಂಬಲ್ಲಿ ಮೀನು ಹಿಡಿಯಲು ಹೋಗಿ ನೀರಿನ ಸುಲಿಗೆ ಸಿಕ್ಕಿ ಇಬ್ಬರು ನೀರು ಪಾಲಾದ ದಾರುಣ ಘಟನೆ ಮೇ 19 ರಂದು ಸಂಭವಿಸಿದೆ.
ಮುಡ್ಡಾಯಿಗುಡ್ಡೆ ನಿವಾಸಿ ಹರೀಶ್ ಪೂಜಾರಿ (48) ಮತ್ತು ಅವರ ಅಕ್ಕನ ಮಗ ಕಾರ್ಕಳ ಕ್ರೈಸ್ಟ್ ಕಿಂಗ್ ಕಾಲೇಜು ವಿದ್ಯಾರ್ಥಿ ಹೃತೇಶ್ ಪೂಜಾರಿ (18) ಮೃತ ದುರ್ದೈವಿಗಳು . ಘಟನಾ ಸ್ಥಳಕ್ಕೆ ಅಜೆಕಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.