
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಗಜಾನನ ಮರಾಠೆ ಇವರು ವಹಿಸಿದ್ದರು.
ಶಾಲೆಯಲ್ಲಿ ಸುಮಾರು 17 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಶೋಭಾ ಸುಕುಮಾರ ಜೈನ್ ಇವರನ್ನು ಶಾಲಾ ಆಡಳಿತ ಮಂಡಳಿಯ ಪರವಾಗಿ ಮೈಸೂರು ಪೇಟ ಹಾರ ಶಾಲು ಹಾಕಿ ಸನ್ಮಾನ ಪತ್ರವನ್ನು ಮತ್ತು ನೆನಪಿನ ಕಾಣಿಕೆಯನ್ನು ನೀಡಿ ಸನ್ಮಾನಿಸಲಾಯಿತು ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕರಾದ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಾಗಭೂಷಣ ಜೋಶಿ ರಾಮ ಸೇರಿಗಾರ ಮುಖ್ಯ ಶಿಕ್ಷಕಿ ಉಪಸ್ಥಿತರಿದ್ದರು ಶಿಕ್ಷಕ ದಿನಾಚರಣೆ ಪ್ರಯುಕ್ತ ಶಾಲಾ ಶಿಕ್ಷಕರಿಗೆ ವಿವಿಧ ಆಟಗಳನ್ನು ಆಡಿಸಿದ್ದು ವಿಜೇತ ಶಿಕ್ಷಕರಿಗೆ ಬಹುಮಾನವನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು ಸನ್ಮಾನ ಪತ್ರವನ್ನು ವಿದ್ಯಾ ವರ್ಧಕ ಸಂಘದ ಕಾರ್ಯದರ್ಶಿಯಾದ ಗೀತಾ ಸೇರಿಗಾರ ಓದಿದರು ಕಾರ್ಯಕ್ರಮದ ನಿರೂಪಣೆಯನ್ನು ಮತ್ತು ಧನ್ಯವಾದ ಸಂಘದ ಸದಸ್ಯರಾದ ರಘುಪತಿ ಕಾಮತ ಇವರು ನೆರವೇರಿಸಿದರು ಈ ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು ವಿದ್ಯಾರ್ಥಿಗಳು ಗ್ರಾಮ ಪಂಚಾಯತ್ ಸದಸ್ಯರು ಮತ್ತು ಶಿಕ್ಷಣ ಅಭಿಮಾನಿಗಳು ಉಪಸ್ಥಿತರಿದ್ದರು.













