ಏಳನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಂದೂರು ಇಲ್ಲಿ ಇಂದು 2025ನೇ 26 ನೇ ಸಾಲಿನ 7ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವನ್ನು ಮುಖ್ಯ ಶಿಕ್ಷಕರದ ಜಗದೀಶ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಯಿತು.

ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಏಳನೇ ತರಗತಿ ಹಾಗೂ ಇತರ ತರಗತಿಯ ಮಕ್ಕಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಗೀತಾ ಭಂಡಾರಿ ಹಾಗೂ ಮುಖ್ಯೋಪಾಧ್ಯಾಯರಾದ ಜಗದೀಶ್ ರವರು ಮಕ್ಕಳಿಗೆ ಹಿತನುಡಿಗಳನ್ನು ನೀಡಿದರು.
ಏಳನೇ ತರಗತಿಯ ವಿದ್ಯಾರ್ಥಿಗಳು ಶಾಲೆಗೆ ಅಗತ್ಯ ವಸ್ತುಗಳ ಕೊಡುಗೆಯನ್ನು ನೀಡಿದರು. ನಂತರ ಸಿಹಿ ಊಟದ ವ್ಯವಸ್ಥೆಯನ್ನು ಗೀತಾ ಭಂಡಾರಿ ಇವರ ವತಿಯಿಂದ ಮಾಡಲಾಗಿತ್ತು. ನಿವೃತ್ತ ಶಿಕ್ಷಕರಾದ ರತ್ನ ಟೀಚರ್ ನಿವೃತ್ತ ಮುಖ್ಯ ಶಿಕ್ಷಕರಾದ ಸತೀಶ್ ಶೆಟ್ಟಿ , ದಯಾನಂದ್ ಕೆ ಸಂಚಾಲಕರಾದ ರಾಧಾಕೃಷ್ಣ ಶೆಟ್ಟಿ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವೃಷಭ ರಾಜಕಡಂಬ ಹಾಗೂ ಶಾಲಾಭಿಮಾನಿಯಾದ ಡಾಕ್ಟರ್ ಭರತೇಶ್ ಹಾಗೂ ಸಹಶಿಕ್ಷಕಿ ಲತಾ ರವರು ಉಪಸ್ಥಿತರಿದ್ದರು. ಎಲ್ಲರನ್ನು ಸ್ವಾಗತಿಸಿ, ವೇದಾಂತ ಧನ್ಯವಾದವಿತ್ತು. ಮಣಿಕಂಠ ಕಾರ್ಯಕ್ರಮ ನಿರ್ವಹಣೆ ಮಾಡಿದನು.









