
ಕಾರ್ಕಳ: ದಿನಾಂಕ 08/06/2026 ರಂದು ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಗಣಹೋಮ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಮತ್ತು ಸಂಭ್ರಮದಿಂದ ಆಯೋಜಿಸಲಾಯಿತು. ಕಾರ್ಯಕ್ರಮವು ಬೆಳಿಗ್ಗೆ ಗಣಪತಿ ಪೂಜೆಯೊಂದಿಗೆ ಆರಂಭವಾಯಿತು. ಅರ್ಚಕರಾದ ದಿನೇಶ್ ಭಟ್ ಇವರ ಮಾರ್ಗದರ್ಶನದಲ್ಲಿ ಗಣಹೋಮವನ್ನು ನೆರವೇರಿಸಲಾಯಿತು.
ಹೋಮದಲ್ಲಿ ಶಾಲಾ ಅಧ್ಯಕ್ಷರಾದ ಡಾ.ಪ್ರಶಾಂತ್ ಹೆಗ್ಡೆ,ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್ .ಕಾಮತ್,ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಯುತ ಪದ್ಮನಾಭ ಮರಾಠೆ, ಕೀರ್ತನ್ ಶೆಣೈ,ಶಿಕ್ಷಕ_ಶಿಕ್ಷಕೇತರ ವೃಂದದವರು ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದರು.
ನಂತರ ಅಕ್ಷರಾಭ್ಯಾಸ ಕಾರ್ಯಕ್ರಮ ನಡೆಯಿತು. ಎಲ್. ಕೆ.ಜಿ ಮಕ್ಕಳಿಗೆ ಅಕ್ಕಿಯಲ್ಲಿ ಹಾಗೂ “ಓಂ” ಬರೆಯಿಸುವ ಮೂಲಕ ವಿದ್ಯಾರಂಭ ಮಾಡಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳಿಗೆ ಶಿಕ್ಷಣದ ಮಹತ್ವವನ್ನು ತಿಳಿಸಲಾಯಿತು.
ಶಾಲೆಯ ಮುಖ್ಯೋಪಾಧ್ಯಾಯರು ಮಕ್ಕಳಿಗೆ ಶುಭ ಹಾರೈಕೆಗಳನ್ನು ಸಲ್ಲಿಸಿ, ಉತ್ತಮ ವಿದ್ಯಾಭ್ಯಾಸದ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸುವಂತೆ ಪ್ರೇರೇಪಿಸಿದರು. ಕಾರ್ಯಕ್ರಮವು ಭಕ್ತಿಪೂರ್ಣ ಹಾಗೂ ಸಂತೋಷದ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿತು.

































