ಅರಣ್ಯಾಧಿಕಾರಿ ಸಂಜೀವ್ ರವರನ್ನು ಸೇವೆಯಿಂದ ವಜಾಗೊಳಿಸಿ: ವಿ. ಸುನಿಲ್ ಕುಮಾರ್

ಕಾರ್ಕಳ: ಬಿಲ್ಲವ ಹೆಣ್ಣು ಮಕ್ಕಳು ಹಾಗೂ ಹಿಂದು ಸಂಘಟನೆಗಳ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನಾಡಿರುವ ಪುತ್ತೂರಿನ ಅರಣ್ಯ ಅಧಿಕಾರಿ
ಸಂಜೀವ್ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.
ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಈ ಬಗ್ಗೆ ಆಗ್ರಹಿಸಿರುವ ಅವರು, ಸರ್ಕಾರಿ ಸೇವಾ ನಿಯಮಗಳನ್ನು ಉಲ್ಲಂಘಿಸಿ ಒಬ್ಬ ಅಧಿಕಾರಿ
ಸಮುದಾಯ, ಸಂಘಟನೆ ಹಾಗೂ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡುವುದು ನಾಗರಿಕ ಸಮುದಾಯ ತಲೆ ತಗ್ಗಿಸುವಂತದ್ದು. ಈ ಬಗ್ಗೆ
ಎಫ್ಐಆರ್ ದಾಖಲಿಸಿ ಪ್ರಕರಣ ಮುಗಿದಿದೆ ಎಂದು ಕಣ್ಣೊರೆಸುವ ತಂತ್ರ ಸಾಲುವುದಿಲ್ಲ ಎಂದು ಹೇಳಿದ್ದಾರೆ.
ಅಧಿಕಾರಿಯ ಹದ್ದುಮೀರಿದ ವರ್ತನೆಯನ್ನು ಕ್ಷಮಿಸಲು ಸಾಧ್ಯವಿಲ್ಲ. ಹೀಗಾಗಿ ಅವರನ್ನು ಸೇವೆಯಿಂದಲೇ ವಜಾಗೊಳಿಸಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ.













