
ಬೆಂಗಳೂರು: ಆಹಾರ ಸಚಿವ ಮುನಿಯಪ್ಪ ವಿಧಾನಸಭೆಯಲ್ಲಿ ಸರ್ಕಾರದಿಂದ ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಅನ್ನು ಹಂಚಿಕೆ ಮಾಡಲ್ಲ ಎಂದು ಹೇಳಿ ಈ ಮೂಲಕ ಹೊಸ ರೇಷನ್ ಕಾರ್ಡ್ ಪಡೆಯುವ ಆಸೆ ಇಟ್ಟುಕೊಂಡಿರುವವರಿಗೆ ರಾಜ್ಯ ಸರ್ಕಾರ ನಿರಾಶೆ ಮಾಡಿದೆ.
ರಾಜ್ಯದಲ್ಲಿ ಕೇಂದ್ರ ನಿಗದಿ ಮಾಡಿದ್ದ ಕಾರ್ಡ್ ನಿಗದಿ ಗುರಿ ಮುಕ್ತಾಯವಾಗಿದ್ದು ಹೊಸ ಕಾರ್ಡ್ ಕೊಡಲು ಅವಕಾಶ ಇಲ್ಲ. ಅನರ್ಹರ ಕಾರ್ಡ್ ರದ್ದು ಮಾಡೋವರೆಗೂ ಹೊಸ ಕಾರ್ಡ್ಗಳು ಕೊಡಲ್ಲ ಎಂದು ಹೇಳಿದರು.
ಕೇಂದ್ರ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ಅನ್ವಯ 4,01,93,000 ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಣೆ ಮಾಡಲು ಗುರಿ ನಿಗದಿ ಮಾಡಲಾಗಿದೆ. ಆದರೆ ರಾಜ್ಯದಲ್ಲಿ ನಿಯಮ ಮೀರಿ 4,50,59,460 ಫಲಾನುಭವಿಗಳಿಗೆ ಪಡಿತರ ಕೊಡಲಾಗುತ್ತಿದೆ. ಕಾಯ್ದೆ ಪ್ರಕಾರ ನಿಗದಿ ಮಾಡಿರುವ ಫಲಾನುಭವಿಗಳಿಗೆ ಪಡಿತರ ಈಗಾಗಲೇ ಕೊಡಲಾಗುತ್ತಿದೆ. ಹೊಸ ರೇಷನ್ ಕಾರ್ಡ್ ಕೊಡಬೇಕಾದರೆ ಅನರ್ಹ ಕಾರ್ಡ್ ರದ್ದು ಮಾಡಿ ಅದೇ ಪ್ರಮಾಣದಲ್ಲಿ ಹೊಸ ಕಾರ್ಡ್ ಕೊಡಬೇಕಾಗುತ್ತದೆ. ಅನರ್ಹ ಕಾರ್ಡ್ ರದ್ದು ಮಾಡೋವರೆಗೂ ಹೊಸ ಕಾರ್ಡ್ ಕೊಡಲು ಸಾಧ್ಯವಿಲ್ಲ ಎಂದು ಸರ್ಕಾರ ವಿವರಣೆ ನೀಡಿದೆ.






















































