ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನಗರದ ಶೇಷಾದ್ರೀಪುರಂ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿ ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ. ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಡೆಯುವುದಿಲ್ಲ. ಈಗಾಗಲೇ ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದ್ದು ಸಂಪೂರ್ಣ ಸರ್ವಿಸ್ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ. ಆರೋಗ್ಯ ಇಲಾಖೆಯಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
30 ಸಾವಿರ ಸಿಬ್ಬಂದಿ ವೇತನವಾಗದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು 2023-24 ರಲ್ಲಿ ಓಪನಿಂಗ್ ಬ್ಯಾಲೆನ್ಸ್ ಹೆಚ್ಚು ಇರ್ತಾ ಇತ್ತು. ಆದರೆ ಕಳೆದ ಸರ್ಕಾರದಿಂದ ಓಪನಿಂಗ್ ಬ್ಯಾಲೆನ್ಸ್ ಕಡಿಮೆಯಾಗಿದ್ದರಿಂದ ನಾವು ರಾಜ್ಯ ಸರ್ಕಾರದಿಂದ ಕೊಡಲು ಆಗುತ್ತಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡದ ಹಿನ್ನಲೆ ಕೊಂಚ ಲೇಟ್ ಆಗಿದೆ. ಇನ್ನೇರಡು ಮೂರು ದಿನಗಳಲ್ಲಿ ವೇತನ ಆಗಬಹುದು. ನಾವು ಯಾವುದೇ ವೇತನ ತಡೆ ಹಿಡಿದಿಲ್ಲ ಎಂದು ಹೇಳಿದ್ದಾರೆ.