ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಸ್ನೇಹ ಪ್ರಥಮ ಸ್ಥಾನ

ಉಡುಪಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಲಾದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿಯ ಆಚರಣೆಯ ಪ್ರಯುಕ್ತ ನಡೆಸಲಾದ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಗಳನ್ನು ಅಳವಡಿಸುವಲ್ಲಿ ನಮ್ಮ ಪಾತ್ರ ಎಂಬ ವಿಷಯದ ಬಗ್ಗೆ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರಿನ ಸ್ನೇಹ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಬಹುಮಾನವನ್ನು ಸ್ವೀಕರಿಸಿದ್ದಾಳೆ.
ವಿದ್ಯಾರ್ಥಿಯ ಸಾಧನೆಗೆ ಕಾಲೇಜು ಅಭಿವೃದ್ಧಿ ಸಮಿತಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.