
ತಿರುವನಂತಪುರ: ರಾಜ್ಯಪಾಲ ರಾಜೇಂದ್ರ ಅರ್ಲೆಕರ್ ತಾವು ಭಾಗವಹಿಸಿದ್ದ ಕಾರ್ಯಕ್ರಮಗಳಲ್ಲಿ ಸಿಂಹದ ಮೇಲೆ ಕುಳಿತಿರುವ ಕೇಸರಿ ಧ್ವಜವನ್ನು ಹಿಡಿದಿರುವ ಭಾರತ ಮಾತೆ ಫೋಟೋ ಬಳಕೆ ಮಾಡಿದ್ದು ಈ ವಿಚಾರ ಕೇರಳದಲ್ಲಿ ಭಾರಿ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಸರ್ಕಾರವು ಇಂತಹ ಕಾರ್ಯಕ್ರಮದಲ್ಲಿ ಭಾರತ ಮಾತೆಯ ಫೋಟೋ ಬಳಕೆಗೆ ನಿರ್ಬಂಧ ವಿಧಿಸಿದೆ.
ರಾಜ್ಯಪಾಲರು ರಾಜ್ಯದ ಮುಖ್ಯಸ್ಥರಾಗಿರುವುದರಿಂದ ಅವರು ಪಾಲ್ಗೊಳ್ಳುವ ಎಲ್ಲಾ ಕಾರ್ಯಕ್ರಮಗಳಲ್ಲಿ ರಾಜಕೀಯ ಮತ್ತು ಧಾರ್ಮಿಕ ಚಿಹ್ನೆ ಲಾಂಛನವನ್ನು ಬಳಸುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂದು ಸಂಪುಟ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ರಾಜ್ಯಪಾಲರ ಭವನಕ್ಕೆ ಸೂಚನಾ ಪತ್ರ ಕಳುಹಿಸಿದ್ದಾರೆ.






















































