
ಹೊಸದಿಲ್ಲಿ: ‘ವಂದೇ ಮಾತರಂ’ ಗೀತೆಯನ್ನು ಎಲ್ಲ ರಾಜ್ಯಗಳ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಹಾಡುವಂತೆ ಕೇಂದ್ರ ಗೃಹ ಸಚಿವಾಲಯ ಬುಧವಾರ ಹೊಸ ನಿರ್ದೇಶನ ಹೊರಡಿಸಿದೆ.
ಸರ್ಕಾರಿ ಸಮಾರಂಭಗಳು ಹಾಗೂ ಶಾಲಾ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆಯ ಜೊತೆಗೆ ‘ವಂದೇ ಮಾತರಂ’ನ ಆರು ಚರಣಗಳನ್ನು ಹಾಡಬೇಕು ಎಂದು ಸೂಚಿಸಲಾಗಿದ್ದು ಜೊತೆಗೆ ಗೀತೆಯನ್ನು ಹಾಡುವಾಗ ಅಥವಾ ನುಡಿಸುವಾಗ ಎಲ್ಲರೂ ಕಡ್ಡಾಯವಾಗಿ ಎದ್ದು ನಿಲ್ಲಬೇಕೆಂದು ಸಚಿವಾಲಯ ತಿಳಿಸಿದೆ.
‘ವಂದೇ ಮಾತರಂ’ಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ 2025ರ ಡಿಸೆಂಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಿದ್ದು ಹೊಸ ಆದೇಶದಂತೆ ಪದ್ಮ ಪ್ರಶಸ್ತಿ ಸೇರಿದಂತೆ ವಿವಿಧ ನಾಗರಿಕ ಪ್ರಶಸ್ತಿ ವಿತರಣಾ ಸಮಾರಂಭಗಳು, ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮಗಳು ಹಾಗೂ ಶಾಲಾ ಸಭೆಗಳಲ್ಲಿ ‘ವಂದೇ ಮಾತರಂ’ ನುಡಿಸುವುದು ಕಡ್ಡಾಯವಾಗಲಿದೆ.



















