
ಹೆಬ್ರಿ :ತಾಲೂಕಿನ ನಾಡ್ಪಾಲು ಗ್ರಾಮದ ಪೀತ್ ಬೈಲು ಪ್ರದೇಶದಲ್ಲಿ ನಕ್ಸಲ್ ನಾಯಕ್ ವಿಕ್ರಂ ಗೌಡ ಅವರ ಎನ್ಕೌಂಟರ್ ಮಾಡಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಾಮಾಜಿಕ ಕಾರ್ಯಕರ್ತರ ನಿಯೋಗವು ಇದೊಂದು ನಕಲಿ ಎನ್ಕೌಂಟರ್ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
ಸಾಮಾಜಿಕ ಕಾರ್ಯಕರ್ತರಾದ ಮುನೀರ್ ಕಾಟಿಪಳ್ಳ, ನವೀನ್ ಸೂರಿಂಜೆ, ಕಾವ್ಯ ಅಚ್ಚುತ್, ನಿತಿನ್ ಬಂಗೇರ ಅವರನ್ನೊಳಗೊಂಡ ನಿಯೋಗವು ಎನ್ಕೌಂಟರ್ ನಡೆದ ಸ್ಥಳಕ್ಕೆ ಭೇಟಿ ನೀಡಿ ಸುತ್ತಮುತ್ತಲಿನ ಪ್ರದೇಶದ ಆದಿವಾಸಿಗಳನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಿದರು.
ಸಾಮಾಜಿಕ ಕಾರ್ಯಕರ್ತರಾದ ಮುನೀರ್ ಕಾಟಿಪಳ್ಳ ಎಂಬವರು ಈ ಕುರಿತು ಪ್ರತಿಕ್ರಿಯಿಸಿ ಇದೊಂದು ಎನ್ಕೌಂಟರ್ ಅಲ್ಲ, ನಕಲಿ ಎನ್ಕೌಂಟರ್ ನಡೆಸಿ ಉದ್ದೇಶಪೂರ್ವಕವಾಗಿ ವಿಕ್ರಂ ಗೌಡನನ್ನು ಹತ್ಯೆ ಮಾಡಲಾಗಿದೆ ಎಂಬ ಸಂಶಯಗಳು ಎದ್ದು ಕಾಣುತ್ತದೆ. ಆದ್ದರಿಂದ ಈ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು. ಹಿರಿಯ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ಸಮಿತಿ ರಚನೆ ಮಾಡಿ ತನಿಖೆ ಮಾಡಿ ಸತ್ಯತೆಯನ್ನು ಹೊರ ತರಬೇಕು ಎಂದು ಆಗ್ರಹಿಸಿದ್ದಾರೆ.



















