
ಬೆಂಗಳೂರು: ನಗರದ ಆಡುಗೊಡಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಬಾಲಕ ಸಾವನ್ನಪ್ಪಿದ್ದು ಘಟನೆಯಲ್ಲಿ 8 ಜನ ಗಾಯಗೊಂಡಿರುವ ಘಟನೆ ನಡೆದಿದೆ.
ತಿಮ್ಮರಾಜು ಎಂಬುವವರ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ ಛಿದ್ರವಾಗಿದೆ. ಮೃತ ಬಾಲಕನನ್ನು ಮುಬಾರಕ್ (8) ಎಂದು ಗುರುತಿಸಲಾಗಿದ್ದು ಗಾಯಾಳುಗಳು ತೀವ್ರ ರಕ್ತಸ್ರಾವ ಹಾಗೂ ಸುಟ್ಟ ಗಾಯಗಳಿಂದ ನರಳುತ್ತಿದ್ದಾರೆ. ಸ್ಫೋಟದಿಂದ ಅಕ್ಕಪಕ್ಕದ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು ಗಾಯಾಳಯಗಳನ್ನು ಸಂಜಯ್ ಗಾಂಧಿ, ರಾಜೀವ್ ಗಾಂಧಿ ಆಸ್ಪತ್ರೆ ಸೇರಿದಂತೆ ಇತರೆ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಸಿಲಿಂಡರ್ ಲೀಕ್ ಆಗಿ ಕೆಮಿಕಲ್ ರಿಯಾಕ್ಷನ್ ಆಗಿ ಈ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದು ಘಟನಾ ಸ್ಥಳಕ್ಕೆ ಆಡುಗೊಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.