ಜಾವಲಿನ್ ಎಸೆತದಲ್ಲಿ ತೃತೀಯ ಸ್ಥಾನ ಪಡೆದ, ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರದ ದೈಹಿಕ ಶಿಕ್ಷಣ ಶಿಕ್ಷಕಿ ವಿದ್ಯಾ ಯು.ಶೆಟ್ಟಿ

ಕಾರ್ಕಳ: ಸೌತ್ ಇಂಡಿಯಾ ಮಾಸ್ಟರ್ಸ್ಅಥ್ಲೆಟಿಕ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ಮಂಗಳ ಕ್ರೀಡಾಂಗಣ ಮಂಗಳೂರು ಇಲ್ಲಿ ದಿನಾಂಕ ಜ.10 ರಿಂದ ಜ.12 ರವರೆಗೆ ನಡೆದ ಸೌತ್ ಏಷ್ಯಾ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್ -2025 ಕ್ರೀಡಾಕೂಟದಲ್ಲಿ ಕಾರ್ಕಳ ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರದ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ವಿದ್ಯಾ .ಯು.ಶೆಟ್ಟಿ 50 ವರ್ಷ ಮೇಲ್ಪಟ್ಟ ಮಹಿಳಾ ವಿಭಾಗದ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಾವಲಿನ್ ಎಸೆತದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.



















