29.3 C
Udupi
Thursday, April 23, 2026
spot_img
spot_img
HomeBlog"ಹಲಾಲ್ ಮುಕ್ತ ಗಣೇಶೋತ್ಸವ" ಆಚರಿಸಿ ಹಿಂದೂ ಜನಜಾಗೃತಿ ಸಮಿತಿ ಕರೆ

“ಹಲಾಲ್ ಮುಕ್ತ ಗಣೇಶೋತ್ಸವ” ಆಚರಿಸಿ ಹಿಂದೂ ಜನಜಾಗೃತಿ ಸಮಿತಿ ಕರೆ

ಉಡುಪಿ : ಶ್ರೀ ಗಣೇಶ ಚತುರ್ಥಿಯ ನಿಮಿತ್ತ ಗಣೇಶೋತ್ಸವ ಆಚರಣೆಯ ಸಂದರ್ಭದಲ್ಲಿ ಹಲಾಲ್ ರಹಿತ ಉತ್ಪನ್ನಗಳನ್ನು ಉಪಯೋಗಿಸಿ ‘ಹಲಾಲ್ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಹಿಂದೂ ಜನಜಾಗೃತಿಯು ಕರೆ ನೀಡಿದೆ. ಈ ಬಗ್ಗೆ ಉಡುಪಿ, ಕುಂದಾಪುರ, ಕಾರ್ಕಳ, ಮೂಡುಬಿದಿರೆ ಸೇರಿದಂತೆ ಉಡುಪಿ ಜಿಲ್ಲೆಯಾದ್ಯಂತ ಗಣೇಶೋತ್ಸವ ಮಂಡಳಿಗಳಿಗೆ, ಉಡುಪಿ ಜಿಲ್ಲಾ ನಗರ ಸಭಾ ಆಯುಕ್ತರಿಗೆ, ಪುರಸಭೆ ಮುಖ್ಯಾಧಿಕಾರಿ ಕಾರ್ಕಳ ಇವರಿಗೆ ಕೂಡಾ ಮನವಿ ನೀಡಲಾಗಿದ್ದು, ಈ ಬಾರಿ 'ಹಲಾಲ್ ಮುಕ್ತ ಗಣೇಶೋತ್ಸವ ಆಚರಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಕರೆ ನೀಡಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಮನ್ವಯಕರಾದ ಚಂದ್ರ ಮೊಗವೀರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಗಣೇಶೋತ್ಸವ ಆಚರಣೆಯ ಸಮಯದಲ್ಲಿ ಶ್ರೀ ಗಣೇಶನ ಪೂಜಾ ಸಾಮಗ್ರಿಗಳು ಮತ್ತು ಪ್ರಸಾದವು ’ಹಲಾಲ್ ಪ್ರಮಾಣೀಕೃತ’ ಆಗಿಲ್ಲವಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಮೂಲತಃ ಮಾಂಸಾಹಾರಕ್ಕೆ ಮಾತ್ರ ಸೀಮಿತವಾಗಿದ್ದ ಹಲಾಲ್’ ಎಂಬ ಮೂಲ ಇಸ್ಲಾಮಿಕ್ ಪರಿಕಲ್ಪನೆಯು ಇಂದು ಆಹಾರ ಧಾನ್ಯಗಳು, ಸಿಹಿತಿಂಡಿಗಳು, ಸೌಂದರ್ಯವರ್ಧಕಗಳು, ಸಸ್ಯಾಹಾರಿ ಆಹಾರಗಳು, ಔಷಧಗಳು, ಪ್ರವಾಸೋದ್ಯಮ, ಆಸ್ಪತ್ರೆಗಳು, ಕಟ್ಟಡಗಳು, ರೆಸ್ಟೋರೆಂಟ್‌ಗಳು, ವೆಬ್‌ಸೈಟ್‌ಗಳು ಹೀಗೆ ಪ್ರತಿಯೊಂದು ಕ್ಷೇತ್ರದಲ್ಲೂ ಕಾಲಿಟ್ಟಿದೆ. ಜಾತ್ಯತೀತ ಭಾರತದಲ್ಲಿ ಧಾರ್ಮಿಕ ಆಧಾರದಲ್ಲಿ ಸರ್ಟಿಫಿಕೇಶನ್ ಕಾನೂನುಬಾಹಿರವಾಗಿದೆ. ಹಾಗಾಗಿ ಈ ಬಾರಿ ’ಹಲಾಲ್ ಮುಕ್ತ ಗಣೇಶೋತ್ಸವ’ ಆಚರಿಸಿರಿ ಎಂದು ಕರೆ ನೀಡಲಾಯಿತು. ಮನವಿಗೆ ಉತ್ತಮ ಸ್ಪಂದನೆ ನೀಡುತ್ತಿದ್ದ ಸಾರ್ವಜನಿಕರು ತಾವು ಹಲಾಲ್ ಯುಕ್ತ ಯಾವುದೇ ಸಾಮಗ್ರಿಗಳನ್ನು ಖರೀದಿಸುವುದಿಲ್ಲ ಹಾಗೂ ಹಲಾಲ್ ಪ್ರಮಾಣೀಕರಣದ ಭೀಕರತೆ ಬಗ್ಗೆ ಇತರರಿಗೂ ಜಾಗೃತಿ ಮೂಡಿಸುತ್ತೇವೆಂದು ಸಂಕಲ್ಪ ಮಾಡಲಾಗಿದೆ ಎಂದಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page