
ಕರಾವಳಿ ಜಿಲ್ಲೆಗಳಿಗೆ ಮತ್ತೆ ಮಳೆ ಅಬ್ಬರ ಮುನ್ಸೂಚನೆ ನೀಡಲಾಗಿದೆ. ಕಳೆದ ಒಂದು ವಾರದಿಂದ ಕೊಂಚ ಬಿಡುವು ನೀಡಿದ್ದ ವರುಣ ಮುಂದಿನ ಒಂದು ವಾರಗಳ ಕಾಲ ಅಬ್ಬರಿಸುವ ಸಾಧ್ಯತೆ ಇದೆ.
ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿ.ಮೀ ತಲುಪುವ ಸಾಧ್ಯತೆಯಿದೆ.













