
ರಾಜ್ಯದಲ್ಲಿ ಎರಡು ದಿನಗಳಿಂದ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ಶಿವಮೊಗ್ಗ ,ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲೂ ಮೋಡಕವಿದ ವಾತಾವರಣವಿರಲಿದೆ. ಉತ್ತರ ಒಳನಾಡಿನ ಬಾಗಳಾದ ಬೆಳಗಾವಿ, ಬೀದರ್ ,ವಿಜಯಪುರ ಬಾಗಲಕೋಟೆ ,ಹಾವೇರಿ ,ಗದಗ ,ಧಾರವಾಡ ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.





