
ಬಂಗಾಳ ಉಪಸಾಗರ ವಾಯುಭಾರ ಕುಸಿತದಿಂದಾಗಿ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಭಾಗಗಳಲ್ಲಿ ನಾಲ್ಕು ದಿನ ಬಾರಿ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಬಾರಿ ಮುಂಗಾರು ಮಳೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಮೇ 26ರಂದು ಕೇರಳ ಪ್ರವೇಶಿಸಲಿದ್ದು ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮಳೆಯಾಗಲಿದೆ .
ದಕ್ಷಿಣ ಒಳನಾಡಿನ ಬೆಂಗಳೂರು, ಕೊಡಗು, ಚಿಕ್ಕಮಗಳೂರು, ಹಾಸನ ಶಿವಮೊಗ್ಗ, ಮೈಸೂರು, ಚಾಮರಾಜನಗರ, ತುಮಕೂರು, ಮಂಡ್ಯ ರಾಮನಗರ ಜಿಲ್ಲೆಗಳಲ್ಲಿ ಮೇ 18 ವರೆಗೆ ಬಾರಿ ಮಳೆಯ ಸಾಧ್ಯತೆ ಇದೆ.
ಕರಾವಳಿಯ ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.























