31.9 C
Udupi
Wednesday, May 6, 2026
spot_img
spot_img
HomeBlog"ಹಿರಿಯರ ಆದರ್ಶಗಳೆ ಬಾಳಿಗೆ ಬೆಳಕು -ಮುನಿರಾಜ ರೆಂಜಾಳ"

“ಹಿರಿಯರ ಆದರ್ಶಗಳೆ ಬಾಳಿಗೆ ಬೆಳಕು -ಮುನಿರಾಜ ರೆಂಜಾಳ”

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ ಆಶ್ರಯದಲ್ಲಿ, “ಹಿರಿಯರೆಡೆಗೆ ಸಾಹಿತ್ಯದ ನಡಿಗೆ”

ಕಾರ್ಕಳ:-ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಸೇವಾ ಮನೋಭಾವದೊಂದಿಗೆ ಘನತೆಯ ಜೀವನವನ್ನು ನಡೆಸಿರುವ ಹಿರಿಯ ಸಾಧಕರ ಆದರ್ಶಗಳೆ ನಮ್ಮ ಬಾಳಿನ ಬೆಳಕಾಗಬೇಕು ಎಂದು ಹಿರಿಯ ಸಾಂಸ್ಕೃತಿಕ ಚಿಂತಕರಾದ ಮುನಿರಾಜ ರೆಂಜಾಳ ಹೇಳಿದರು. ಅವರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ ಆಶ್ರಯದಲ್ಲಿ ನಡೆದ “ಹಿರಿಯರೆಡೆಗೆ ಸಾಹಿತ್ಯದ ನಡಿಗೆ” ಕಾರ್ಯಕ್ರಮದಲ್ಲಿ ಬಜಗೋಳಿ ನಲ್ಲೂರಿನ ಹಿರಿಯ ಸಮಾಜ ಸೇವಕರಾದ ಜಗತ್ಪಾಲ ಕಡಂಬರನ್ನು ಅಭಿನಂದಿಸಿ ಮಾತನಾಡುತ್ತಿದ್ದರು.


ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕಿನ ಇಪ್ಪನೆಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಕೆ ಗುಣಪಾಲ ಕಡಂಬರು ಸಮಾಜದ ನೊಂದವರ ಪರವಾಗಿ ನಿಂತು ನ್ಯಾಯಕ್ಕಾಗಿ ಹೋರಾಟ ಮಾಡಿದ ಜಗತ್ಪಾಲ ಕಡಂಬರ ಜನಪರ ಕಾಳಜಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ಕಸಾಪ ದ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ವಹಿಸಿದ್ದರು.
ಕಾರ್ಯಕ್ರಮ ವೇದಿಕೆಯಲ್ಲಿ ಕಸಾಪ ಜಿಲ್ಲಾಧ್ತಕ್ಷರಾದ ನೀಲಾವರ ಸುರೇಂದ್ರ ಅಡಿಗ,ಕರ್ನಾಟಕ ರಾಜ್ಯ ಕ್ವಾರಿ ಕ್ರಷರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾದ ಡಾ.ರವೀಂದ್ರ ಶೆಟ್ಟಿ ಬಜಗೋಳಿ,ರಂಗ ಸಂಸ್ಕೃತಿ ಕಾರ್ಕಳದ ಅಧ್ಯಕ್ಷರಾದ ಉದ್ಯಮಿ ನಿತ್ಯಾನಂದ ಪೈ, ಹಿರಿಯ ಸಾಹಿತಿ ಉಪೇಂದ್ರ ಸೋಮಯಾಜಿ, ರೂಪ ರವೀಂದ್ರ ಶೆಟ್ಟಿ,ಕಸಾಪ ಪದಾಧಿಕಾರಿಗಳಾದ ಡಾ ಸುಮತಿ, ಶಿವ ಸುಬ್ರಹ್ಮಣ್ಯ ಭಟ್, ಸೂಡ ದೇವದಾಸ್, ಸುಲೋಚನ, ತಿಪ್ಪೇಸ್ವಾಮಿ, ಶ್ರೀವತ್ಸ ಮೊದಲಾದವರು ಉಪಸ್ಥಿತರಿದ್ದರು. ನಲ್ಲೂರು ಹಿರಿಯ ಪ್ರಾರ್ಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ನಾಗೇಶ್ ಸ್ವಾಗತಿಸಿ, ಕಸಾಪ ಗೌರವ ಕಾರ್ಯದರ್ಶಿ ದೇವದಾಸ ಕೆರೆಮನೆ ವಂದಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page