
ಪ್ರಧಾನಿ ನರೇಂದ್ರ ಮೋದಿಯವರು 1975ರಲ್ಲಿ ಕಾಂಗ್ರೆಸ್ ಸರ್ಕಾರವು ದೇಶದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯ ಕುರಿತು ಎಕ್ಸ್ನಲ್ಲಿ ಬರೆದಿದ್ದು ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರವು ಸಂವಿಧಾನವನ್ನು ತುಳಿದು, ಮೂಲಭೂತ ಸ್ವಾತಂತ್ರ್ಯವನ್ನು ಬುಡಮೇಲು ಮಾಡಿತ್ತು ಎಂದು ಹೇಳಿದ್ದಾರೆ.
ತುರ್ತು ಪರಿಸ್ಥಿತಿಯ ಕರಾಳ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ಮೂಲಭೂತ ಸ್ವಾತಂತ್ರ್ಯವನ್ನು ಹೇಗೆ ಕೊನೆಗೊಳಿಸಿತು. ಪ್ರತಿಯೊಬ್ಬ ಭಾರತೀಯನು ಆಳವಾಗಿ ಗೌರವಿಸುವ ಭಾರತದ ಸಂವಿಧಾನವನ್ನು ಹೇಗೆ ತುಳಿಯಿತು ಎಂಬುದನ್ನು ನಮಗೆ ನೆನಪಿಸುತ್ತದೆ. ಅಧಿಕಾರದಲ್ಲಿ ಉಳಿಯಲು ಆಗಿನ ಕಾಂಗ್ರೆಸ್ ಸರ್ಕಾರವು ಪ್ರತಿಯೊಂದು ಪ್ರಜಾಪ್ರಭುತ್ವದ ತತ್ವಗಳನ್ನು ಕಡೆಗಣಿಸಿ ದೇಶವನ್ನು ಜೈಲಿನಂತೆ ಮಾಡಿತ್ತು ಎಂದು ಮೋದಿ ಬರೆದು ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ಒಪ್ಪದ ಜನರಿಗೆ ಚಿತ್ರಹಿಂಸೆ ನೀಡಲಾಯಿತು, ದುರ್ಬಲ ವರ್ಗಗಳನ್ನು ಗುರಿಯಾಗಿಸಲು ಸಾಮಾಜಿಕವಾಗಿ ಪ್ರತಿಗಾಮಿ ನೀತಿಗಳನ್ನು ಜಾರಿಗೆ ತರಲಾಯಿತು. ತುರ್ತು ಪರಿಸ್ಥಿತಿ ಹೇರಿದವರಿಗೆ ನಮ್ಮ ಸಂವಿಧಾನದ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಹಕ್ಕು ಇಲ್ಲ ಎಂದರು. ಪತ್ರಿಕಾ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಲು ಮಸೂದೆ ತರಲಾಗಿತ್ತು, ಹಲವು ಸಂದರ್ಭಗಳಲ್ಲಿ 356ನೇ ವಿಧಿಯನ್ನು ವಿಧಿಸಿದವರು ಕೂಡ ಇವರೇ. ಯಾವ ಪಕ್ಷದ ಕಾಲದಲ್ಲಿ ತುರ್ತು ಪರಿಸ್ಥಿತಿ ಹೇರಿತ್ತೋ ಆ ಪಕ್ಷ ಇನ್ನೂ ಜೀವಂತವಾಗಿದೆ. ತಮ್ಮ ಸಾಂಕೇತಿಕತೆಯ ಮೂಲಕ ಸಂವಿಧಾನದ ಬಗೆಗಿನ ತಿರಸ್ಕಾರವನ್ನು ಮರೆಮಾಡುತ್ತಾರೆ. ಆದರೆ ಭಾರತದ ಜನರು ಅವರ ಕಾರ್ಯಗಳ ಮೂಲಕ ನೋಡಿದ್ದಾರೆ. ಜನರು ಮತ್ತೆ ಅವರನ್ನು ತಿರಸ್ಕರಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ