
ಬಜಗೋಳಿ:ಮುಡಾರು ಗ್ರಾಮದ ಹೆಪೆಜಾರಿನಲ್ಲಿ ಶ್ರೀ ಸಿದ್ದಿವಿನಾಯಕ ಭಜನಾ ತಂಡ ನೆಲ್ಲಿಗುಡ್ಡೆ ಇದರ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.
ಈ ಸಂಧರ್ಭದಲ್ಲಿ ಭಜನಾ ಸಂಸ್ಕಾರ ವೇದಿಕೆಯ ತಾಲೂಕು ಅಧ್ಯಕ್ಷರಾದ ಗುರುಪ್ರಸಾದ್, ನೆಲ್ಲಿಗುಡ್ಡೆ ಗೆಳೆಯರ ಬಳಗದ ಅಧ್ಯಕ್ಷರಾದ ಸುರೇಶ್ ಸಾಲ್ಯಾನ್, ಗ್ರಾಮ ಪಂಚಾಯತ್ ಸದಸ್ಯರಾದ ರಜತ್ ರಾಮ್ ಮೋಹನ್, ತಾಲೂಕು ಭೂ ಅಭಿವೃದ್ಧಿ ಬ್ಯಾಂಕ್ ನ ನಿರ್ದೇಶಕಿ ಜಯಲಕ್ಷ್ಮೀ ಹೆಗ್ಡೆ, ಪಂಚಾಯತ್ ಮಾಜಿ ಅಧ್ಯಕ್ಷರಾದ ಉಮೇಶ್ ಸಾಲ್ಯಾನ್, ಗೆಳೆಯರ ಬಳಗದ ಸಂಘಟನಾ ಕಾರ್ಯದರ್ಶಿ ಸುನೀಲ್ ಶೆಟ್ಟಿ, ಭಜನಾ ತಂಡದ ಮುಖ್ಯಸ್ಥೆ ಸುಚಿತ್ರಾ ಶೆಟ್ಟಿ, ಊರಿನ ಹಿರಿಯರಾದ ಸಾಧು ದೇವಾಡಿಗ ಮತ್ತು ಭಜನಾ ತಂಡದ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.














