
ಗಂಗಾವತಿ: ಮಂಗಳವಾರ ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥ ಶ್ರೀಗಳು ತಾಲೂಕಿನ ಮರಳಿ ಗ್ರಾಮದ ತಪೋವನಕ್ಕೆ ಆಗಮಿಸಿ, ಶ್ರೀಕೃಷ್ಣ ಸಂಸ್ಥಾನ ಪೂಜೆ ಹಾಗೂ ಮಂತ್ರಾಲಯಕ್ಕೆ ತೆರಳುವ ಪಾದಯಾತ್ರಿಗಳನ್ನು ಆಶೀರ್ವದಿಸಿ ಪತ್ರಕರ್ತರೊಂದಿಗೆ ಮಾತನಾಡಿ ಜಾತ್ಯತೀತ ದೇಶ, ಸರ್ಕಾರ ಎನ್ನುವವರು ಜಾತಿಗಣತಿ ವರದಿ ಮಂಡಿಸುವುದಾಗಿ ಹೇಳುತ್ತಿರುವುದು ಹಾಸ್ಯಾಸ್ಪದ. ರಾಜ್ಯ ಸರ್ಕಾರ ಜಾತಿಗಣತಿ ವರದಿ ಎಂಬ ಅಸ್ತ್ರವನ್ನಿಟ್ಟುಕೊಂಡು ತಮ್ಮ ತಪ್ಪುಗಳನ್ನು ಮರೆಮಾಚುವಂತೆ ಮಾಡಲು ಯತ್ನಿಸುತ್ತಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಒಂದೆಡೆ ಜಾತಿ ರಾಜಕೀಯ ಬೇಡ ಎನ್ನುತ್ತಲೇ, ಜಾತಿಗಣತಿ ವರದಿ ಜಾರಿ ಅಗತ್ಯವಿದೆ ಎನ್ನುತ್ತಿದೆ. ಸರ್ಕಾರ ಏನು ಮಾಡಲು ಹೊರಟಿದೆ. ಜಾತಿಗಣತಿ ವರದಿಯಿಂದ ಜಾತಿಗಳ ಮಧ್ಯೆ ವೈಷಮ್ಯ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.






















































