29.9 C
Udupi
Friday, March 13, 2026
spot_img
spot_img
HomeBlogನೂತನ ಅಧ್ಯಕ್ಷರ ಆಯ್ಕೆಯಿಂದ ಪಕ್ಷಕ್ಕೆ ಬಲ: ಉದಯ ಶೆಟ್ಟಿ ಮುನಿಯಾಲು

ನೂತನ ಅಧ್ಯಕ್ಷರ ಆಯ್ಕೆಯಿಂದ ಪಕ್ಷಕ್ಕೆ ಬಲ: ಉದಯ ಶೆಟ್ಟಿ ಮುನಿಯಾಲು

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ, ಪದಾಧಿಕಾರಿಗಳ ಸಭೆ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು , ಕಾಂಗ್ರೆಸ್ ಜನಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಉದಯ ಶೆಟ್ಟಿ ಮುನಿಯಾಲು ಅವರು ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆಯಿಂದ ಪಕ್ಷಕ್ಕೆ ಬಲ ಬಂದಂತಾಗಿದೆ ಎಂದರು.

ಕಾರ್ಕಳ ಬ್ಲಾಕ್ ಸಮಿತಿಗೆ ಆಯ್ಕೆಯಾದ ಶುಭದ್ ರಾವ್ ಮತ್ತು ಹೆಬ್ರಿ ಬ್ಲಾಕ್ ಸಮಿತಿಗೆ ಆಯ್ಕೆಯಾದ ಗೋಪಿನಾಥ್ ಭಟ್ ಅವರುಗಳು ಕಾಂಗ್ರೆಸ್ ಪಕ್ಷದಲ್ಲಿ ಅನೇಕ ವರ್ಷದಿಂದ ದುಡಿಯುತ್ತಾ ವಿವಿಧ ಸ್ಥರಗಳ ಜವಾಬ್ದಾರಿಯನ್ನು ನಿರ್ವಹಿಸಿ ಇಂದು ಬ್ಲಾಕ್ ಅಧ್ಯಕ್ಷರುಗಳಾಗಿ ಆಯ್ಕೆಯಾಗಿರುವುದು ಇದು ಕಾರ್ಯಕರ್ತರಿಗೆ ಸಂದ ಗೌರವವಾಗಿದೆ ಎಂದರು. ಕಾರ್ಕಳ ವಿಧಾನಸಭಾ ಕ್ಷೇತ್ರದ ಪ್ರತಿ ಬೂತ್ ಮಟ್ಟದಲ್ಲೂ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟಿ ಬೆಳೆಸುವ ಜವಾಬ್ದಾರಿ ಎಲ್ಲರದಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಉದಯ ಶೆಟ್ಟಿ ಮುನಿಯಾಲು ಅವರ ಮಾರ್ಗದರ್ಶನದಂತೆ ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಗೆ ನೂತನ ಅದ್ಯಕ್ಷರಾಗಿ ಭಾನು ಭಾಸ್ಕರ್ ಹಾಗೂ ಕಾರ್ಕಳ ನಗರ ಕಾಂಗ್ರೆಸ್ ಸಮಿತಿಗೆ ರಾಜೇಂದ್ರ ಕಾರ್ಕಳ ಅವರುಗಳನ್ನು ಆಯ್ಕೆ ಪ್ರಕ್ರೀಯೆ ನಡೆಯಿತು.

ಸಭೆಯಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸಿನ ನಿಕಪೂರ್ವ ಅದ್ಯಕ್ಷರಾದ ಸದಾಶಿವ ದೇವಾಡಿಗ, ನೂತನ ಅದ್ಯಕ್ಷರಾದ ಶುಭದ್ ರಾವ್, ಹೆಬ್ರಿ ಬ್ಲಾಕ್ ಅದ್ಯಕ್ಷರಾದ ಗೋಪಿನಾಥ್ ಭಟ್, ಕೆಪಿಸಿಸಿ ಕಿಸಾನ್ ಘಟಕದ ರಾಜ್ಯ ಕಾರ್ಯದರ್ಶಿ ಉದಯ.ವಿ. ಶೆಟ್ಟಿ, ಕಜಾರ್ಜ್ ಕ್ಯಾಸ್ತಲಿನೊ, ಗ್ಯಾರಂಟಿ ಸಮಿತಿ ಅನುಷ್ಠಾನ ಸಮಿತಿಯ ಅದ್ಯಕ್ಷರಾದ ಅಜಿತ್ ಹೆಗ್ಡೆ ಮಾಳ, ಅನಿತಾ ಡಿಸೋಜ, ನಗರ ಮಹಿಳಾ ಕಾಂಗ್ರೆಸ್ ಘಟಕದ ಅದ್ಯಕ್ಷೆ ರೀನಾ ಡಿಸೋಜ, ಉಮೇಶ್ ರಾವ್ ಬಜಗೋಳಿ, ಎಸ್ಸಿ ಘಟಕದ ಅಣ್ಣಪ್ಪ ನಕ್ರೆ, ಅಲ್ಪ ಸಂಖ್ಯಾತ ಘಟಕದ ಶಬೀರ್ ಅಹಮ್ಮದ್ ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿ, ಬ್ಲಾಕ್ ಯುವ ಕಾಂಗ್ರೆಸ್ ಅದ್ಯಕ್ಷರಾದ ಯೋಗೀಶ್ ಇನ್ನಾ ಧನ್ಯವಾದವಿತ್ತರು.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page