
ಉಡುಪಿ: ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮಾಜಿ ಶಾಸಕ ರಘುಪತಿ ಭಟ್ ರವರು ಮತ್ತೊಮ್ಮೆ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ತನ್ನ ಸುಸ್ತಿದಾರರ ಎಫ್ಐಆರ್ ವಿರುದ್ಧದ ತನಿಖೆಗೆ ಹೈಕೋರ್ಟ್ ಮೂಲಕ ತಡೆಯಾಜ್ಞೆ ತಂದಿದ್ದಾರೆ. ಅದನ್ನು ತಕ್ಷಣ ತೆರವು ಮಾಡಿ ತನಿಖೆಗೆ ಸಹಕಾರ ನೀಡಬೇಕು ಎಂದು ಪತ್ರ ಬರೆದು ಮಾಧ್ಯಮಗಳಿಗೆ ಸುಳ್ಳು ಸುದ್ದಿ ನೀಡಿದ್ದು ಈ ತಡೆಯಾಜ್ಞೆ ಪ್ರತಿ ರಘುಪತಿ ಭಟ್ ಬಳಿ ಇದ್ದರೆ ತಕ್ಷಣ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಮಾಧ್ಯಮಗಳಿಗೆ ನೀಡುವಂತೆ ಆಗ್ರಹಿಸಿದ್ದಾರೆ.
ರಘುಪತಿ ಭಟ್ ಆಧಾರ ರಹಿತ ಆರೋಪಗಳಿಗೆ ಬ್ಯಾಂಕಿನ ಆಡಳಿತ ಮಂಡಳಿ ಉತ್ತರ ನೀಡಿ ಯಾವುದೇ ತನಿಖೆಗೆ ಸ್ವಾಗತ ಎಂದು ತಿಳಿಸಿದರೂ ಹತಾಶ ಮನಸ್ಥಿತಿಯ ರಘುಪತಿ ಭಟ್ ಇದೀಗ ನ್ಯಾಯಾಂಗ ವ್ಯವಸ್ಥೆಯನ್ನು ತಿರುಚಿ ಸುಳ್ಳು ಸುದ್ದಿ ಸೃಷ್ಟಿಸಿ ಸಾರ್ವಜನಿಕರು ಹಾಗೂ ಮಾಧ್ಯಮಗಳನ್ನು ದಾರಿ ತಪ್ಪಿಸುತ್ತಿದ್ದಾರೆ. ತಮ್ಮ ಸ್ವಾರ್ಥ ಸಾಧನೆಗಾಗಿ ಇಡೀ ಸಹಕಾರಿ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದು ಇದು ಇಡೀ ಸಹಕಾರಿ ಕ್ಷೇತ್ರಕ್ಕೆ ಮಾಡಿದ ಅಪಮಾನ ಎಂದು ಕಿಡಿಕಾರಿದ್ದಾರೆ



















