22.3 C
Udupi
Friday, February 20, 2026
spot_img
spot_img
HomeBlogಅರಣ್ಯ ಮಾರ್ಗವಾಗಿ ಕಾಲ್ನಡಿಗೆಯಲ್ಲಿ ಬರುವ ಶಬರಿಮಲೆ ಭಕ್ತರಿಗೆ ನೀಡುವ ವಿಶೇಷ ಪಾಸ್‌ ತಾತ್ಕಾಲಿಕ ರದ್ದು

ಅರಣ್ಯ ಮಾರ್ಗವಾಗಿ ಕಾಲ್ನಡಿಗೆಯಲ್ಲಿ ಬರುವ ಶಬರಿಮಲೆ ಭಕ್ತರಿಗೆ ನೀಡುವ ವಿಶೇಷ ಪಾಸ್‌ ತಾತ್ಕಾಲಿಕ ರದ್ದು

ಶಬರಿಮಲೆ: ತಿರುವಾಂಕೂರು ದೇವಸ್ವಂ ಮಂಡಳಿಯು ಅರಣ್ಯ ಮಾರ್ಗವಾಗಿ ಕಾಲ್ನಡಿಗೆಯಲ್ಲಿ ಬರುವ ಶಬರಿಮಲೆ ಭಕ್ತರಿಗೆ ವಿಶೇಷ ಪಾಸ್‌ಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ತಿಳಿಸಿದೆ.

ದೇವಸ್ವಂ ಮಂಡಳಿ ಸದಸ್ಯ ಎ.ಅಜಿಕುಮಾರ್ ವರ್ಚುವಲ್ ಸರತಿ ವ್ಯವಸ್ಥೆ ಮತ್ತು ಸ್ಪಾಟ್ ಬುಕ್ಕಿಂಗ್ ಮೂಲಕ ಪಂಪಾ ಮೂಲಕ ಆಗಮಿಸುವ ಭಕ್ತರು ದರ್ಶನಕ್ಕಾಗಿ ದೀರ್ಘಾವಧಿ ಕಾಯುವ ಸಮಯವನ್ನು ತಡೆಯಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಅರಣ್ಯ ಮಾರ್ಗದಲ್ಲಿ ಸಂಚರಿಸುವ 5,000 ಭಕ್ತರಿಗೆ ವಿಶೇಷ ಪಾಸ್ ನೀಡುವ ವ್ಯವಸ್ಥೆ ಮಾಡಲಾಗಿದ್ದು ಆದರೆ, ಅರಣ್ಯ ಮಾರ್ಗವಾಗಿ ಆಗಮಿಸುವ ಭಕ್ತರ ಸಂಖ್ಯೆ ಐದು ಪಟ್ಟು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಿಶೇಷ ಪಾಸ್ ನೀಡುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಮುಂದಿನ ಸೂಚನೆ ಬರುವವರೆಗೂ ವಿಶೇಷ ಪಾಸ್‌ಗಳನ್ನು ನೀಡದಿರಲು ಮಂಡಳಿ ನಿರ್ಧರಿಸಿದೆ ಎಂದು ಪ್ರಕಟಣೆ ತಿಳಿಸಿದೆ.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page