
ಆಂಧ್ರಪ್ರದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿಯಲ್ಲಿ ಕಾಲ್ತುಳಿತದ ಕಾರಣ 7 ಮಂದಿ ಸಾವನ್ನಪ್ಪಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ.
ತಿರುಪತಿಯ ವೈಕುಂಠ ದ್ವಾರದರ್ಶನದ ಟಿಕೆಟ್ ತೆಗೆದುಕೊಳ್ಳುವ ವೇಳೆ ಬಾರಿ ನೂಕು ನುಗ್ಗಲು ಉಂಟಾಗಿ ಈ ಘಟನೆ ಸಂಭವಿಸಿದೆ. ಜನವರಿ 10ರಂದು ವೈಕುಂಠ ಏಕಾದಶಿಯ ಹಿನ್ನೆಲೆಯಲ್ಲಿ ತಿರುಪತಿಯ ಕೌಂಟರ್ ಗಳಲ್ಲಿ ಟಿಕೆಟ್ ವಿತರಿಸಲು ನಿರ್ಧರಿಸಲಾಗಿತ್ತು ಎನ್ನಲಾಗಿದೆ.
ಘಟನೆಯ ಕುರಿತು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಟೆಲಿ ಕಾನ್ಫರೆನ್ಸ್ ನಡೆಸಿ ಅಧಿಕಾರಿಗಳ ವರ್ತನೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.



















