
ಉಡುಪಿ: ರೈಲ್ವೆ ಹಳಿ ಬಳಿಯಲ್ಲಿ ಅಪ್ರಾಪ್ತ ಬಾಲಕರು ಕಬ್ಬಿಣ ಕದ್ದ ಆರೋಪದಲ್ಲಿ ಅವರ ಮೇಲೆ ಹಲ್ಲೆ ಮಾಡಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡಿದ ಪ್ರಕರಣಕ್ಕೆ ಸಂಬಂಧಿಸಿದ ಮತ್ತೆರಡು ಪ್ರಕರಣಗಳು ದಾಖಲಾಗಿದೆ. ಅದೇನೆಂದರೆ ಕಬ್ಬಿಣ ಕದ್ದ ಬಾಲಕರು ಅಪ್ರಾಪ್ತರಾಗಿದ್ದು ಬಾಲಕರಿಗೆ ದ್ವಿಚಕ್ರ ವಾಹನ ನೀಡಿರುವ ಕುರಿತು ಅವರ ಹೆತ್ತವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಯು ಮುಂದಾಗಿದೆ.
ಕೊಂಕಣ ರೈಲ್ವೆ ಕಾನೂನು ವಿಭಾಗವು ಬಾಲಕರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದು ಈ ಪ್ರಕರಣವು ಕಾನೂನು ಸಂಘರ್ಷಕ್ಕೊಳಗಾದ ಬಾಲಕರ ವಿರುದ್ಧವಿರುವುದರಿಂದ ಈ ಕುರಿತು ಸುಪ್ರೀಂ ಕೋರ್ಟ್ ಹಾಗೂ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಯಮಗಳನ್ನು ಪಾಲಿಸುವುದು ಅಗತ್ಯವಾಗಿರುತ್ತದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.













