ನ್ಯಾಯಾಲಯದ ಆವರಣದಲ್ಲಿ ಮುತ್ತಿಟ್ಟ ಯುವಕ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗೆ ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಕರೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಯುವಕನೋರ್ವ ಮುತ್ತಿಟ್ಟ ಘಟನೆ ನಡೆದಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಎಸ್ ಡಿಪಿಐ ಮುಖಂಡ ಶಾಫಿ ಬೆಳ್ಳಾರೆಯನ್ನು, 2017 ರಲ್ಲಿ ಆರ್ ಎಸ್ ಎಸ್ ಹಾಗೂ ಕಲ್ಲಡ್ಕ ಪ್ರಭಾಕರ್ ವಿರುದ್ಧ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಬಾಡಿ ವಾರೆಂಟ್ ಮೂಲಕ ಆರೋಪಿಯನ್ನು ಹಾಜರುಪಡಿಸಬೇಕಿತ್ತು. ಈ ಸಂದರ್ಭದಲ್ಲಿ ಭದ್ರತೆಯ ನಡುವೆಯೂ ಯುವಕನೋರ್ವ ಆರೋಪಿಯ ಹಣೆಗೆ ಮುತ್ತಿಟ್ಟಿದ್ದಾನೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.





















