2.80 ಕೋಟಿ ಅನುದಾನದೊಂದಿಗೆ , ಶೀಘ್ರವೇ ಕ್ಷೇತ್ರದ ವಿವಿಧ ಸೇತುವೆ, ನೂತನ ಕಿಂಡಿ ಅಣೆಕಟ್ಟು ಕಾಮಗಾರಿ ಆರಂಭ

ಕಾರ್ಕಳ:27 : ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಸೇತುವೆ ಸಹಿತ ನೂತನ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಸರಕಾರದಿಂದ ರೂ. 02.80 ಕೋಟಿ ಅನುದಾನ ಮಂಜೂರಾಗಿರುತ್ತದೆ ಎಂದು ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್ ಅವರು ತಿಳಿಸಿರುತ್ತಾರೆ.
ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಸಾಂತಕ್ಯಾರು ಮೂಲ್ದೂಟ್ಟು ಎಂಬಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ 02.00 ಕೋಟಿ ಅನುದಾನ, ಮಾಳ ಗ್ರಾಮದ ಶ್ರೀ ಅಚ್ಚು ಪೂಜಾರಿ ಮನೆ ಬಳಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ. 30.00 ಲಕ್ಷ ಅನುದಾನ, ಹಾಗೂ ನಿಟ್ಟೆ ಗ್ರಾಮದ ಬೆರಂದೊಟ್ಟು ಗರಡಿ ಬಳಿಯ ತೊಯ್ಪಲಕಟ್ಟೆ ಎಂಬಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ. 50.00 ಲಕ್ಷ ಅನುದಾನ ಸೇರಿದಂತೆ ಒಟ್ಟು 02.80 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳಿಗೆ ಸರಕಾರದ ಅನುಮೋದನೆ ದೊರೆತಿರುತ್ತದೆ.
ಮಾನ್ಯ ಶಾಸಕರ ವಿಶೇಷ ಮುತುವರ್ಜಿ ಹಾಗೂ ನಿರಂತರ ಪ್ರಯತ್ನದಿಂದಾಗಿ ಸರಕಾರದಿಂದ ಅನುದಾನ ಮಂಜೂರಾಗಿದ್ದು, ಆದಷ್ಟೂ ಶೀಘ್ರವಾಗಿ ಕಾಮಗಾರಿಗಳನ್ನು ಪ್ರಾರಂಭಿಸಿಲಾಗುವುದು ಎಂದು ಕಾರ್ಕಳ ಶಾಸಕರ ʻವಿಕಾಸʼ ಜನಸೇವಾ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






















































