✨ ಎಸ್. ವಿ.ಟಿ ವನಿತಾ ಪದವಿ ಪೂರ್ವ ಕಾಲೇಜು, ಕಾರ್ಕಳ

ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಬೆಂಗಳೂರಿನ ಜನ ಆರೋಗ್ಯ ಕೇಂದ್ರ ಎಪಿಡಿಮಿಯೋಲಜಿ ವಿಭಾಗ ನಿಮಾನ್ಸ್ ಇವರ ವತಿಯಿಂದ ಯುವ ಜನರಿಂದ ಯುವ ಜನರಿಗಾಗಿ ಯುವ ಸ್ಪಂದನ ಕಾರ್ಯಕ್ರಮ ಕಾರ್ಕಳದ ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಯುವ ಪರಿವರ್ತಕರಾಗಿ ಆಗಮಿಸಿದ ಸಂಪನ್ಮೂಲ ವ್ಯಕ್ತಿ ಹಾಗೂ ಪೋಕ್ಸೋ ಕಾಯ್ದೆಯ ಆಪ್ತ ಸಮಾಲೋಚಕಿ ಶ್ರೀಮತಿ ಸುನಿತಾ ರವರು ವಿವಿಧ ಚಟುವಟಿಕೆಗಳ ಮೂಲಕ ಸಂಬಂಧ ಸುರಕ್ಷತೆ ಸಂವಹನ ಜೀವನ ಶಿಕ್ಷಣ ಆರೋಗ್ಯಕರ ಜೀವನಶೈಲಿ ಮುಂತಾದ ವಿಷಯಗಳ ಬಗ್ಗೆ ವಿಸ್ತೃತ ವಿವರ ಕೊಟ್ಟು, ಪೋಕ್ಸೋ ಕಾಯ್ದೆ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಹಿರಿಯ ಸಹ ಶಿಕ್ಷಕರಾದ ಯೋಗೇಂದ್ರ ನಾಯಕ್, ಶಿಕ್ಷಕ ಸುನಿಲ್ ಎಸ್ ಶೆಟ್ಟಿ , ಕನ್ನಡ ಭಾಷಾ ಉಪನ್ಯಾಸಕರಾದ ಪದ್ಮಪ್ರಭ ಇಂದ್ರ ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಚಾರ್ಯರಾದ ನೇಮಿರಾಜ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಹಿಂದಿ ಉಪನ್ಯಾಸಕಿ ಶ್ರೀಮತಿ ಸರಸ್ವತಿ ಸ್ವಾಗತಿಸಿ. ಉಪನ್ಯಾಸಕಿ ಸುಮಂಗಲ ಕಾರ್ಯಕ್ರಮದ ನಿರೂಪಿಸಿದರು. ಗಣಕ ವಿಜ್ಞಾನ ಉಪನ್ಯಾಸಕಿ ಕುಮಾರಿ ರಶ್ಮಿತಾ ವಂದಿಸಿದರು.























































