23 C
Udupi
Thursday, August 14, 2025
spot_img
spot_img
HomeBlogಪ್ರಮೋದ್ ಮುತಾಲಿಕ್ ಶಾಸಕ ವಿ.ಸುನೀಲ್ ಕುಮಾರ್ ವಿರುದ್ಧ ದಾಖಲಿಸಿದ್ದ ಕೇಸ್ ಖುಲಾಸೆ

ಪ್ರಮೋದ್ ಮುತಾಲಿಕ್ ಶಾಸಕ ವಿ.ಸುನೀಲ್ ಕುಮಾರ್ ವಿರುದ್ಧ ದಾಖಲಿಸಿದ್ದ ಕೇಸ್ ಖುಲಾಸೆ

ಮಾನನಷ್ಟವಾಗುವಂಥ ವಿಚಾರಗಳಿಲ್ಲ ಎಂದ ನ್ಯಾಯಾಲಯ..

ಬೆಂಗಳೂರು: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಾಯಾಲಯ ಬುಧವಾರ ವಜಾಗೊಳಿಸಿದೆ.


ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಕೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದ ಸುನೀಲ್ ಕುಮಾರ್, ಪರಾಜಿತ ಅಭ್ಯರ್ಥಿಯಾದ ತಮ್ಮ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.


2023ರ ಮೇ 14ರಂದು ಕಾರ್ಕಳ ಬಂಡಿಮಠ ಬಸ್ ನಿಲ್ದಾಣ ಬಳಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಸುನಿಲ್ ಕುಮಾರ್, ಪ್ರಮೋದ್ ಮುತಾಲಿಕರೇ ನೀವು ಹಣಕ್ಕೊಸ್ಕರ ಉತ್ತರ ಕರ್ನಾಟಕದಲ್ಲಿ ಹಿಂದೂಗಳ ಹತ್ಯೆಯನ್ನು ಟೈಗರ್ ಗ್ಯಾಂಗಿನ ನೆಪದಲ್ಲಿ ಎಷ್ಟು ಬಾರಿ ಮಾಡಿಸಿದ್ದೀರಾ? ಆ ಹತ್ಯೆಯನ್ನು ಮಾಡಿದಂತಹವರು ಇವತ್ತಿಗೂ ಕಲಬುರಗಿ ಜೈಲಿನಲ್ಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆಂದು ಸುನಿಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ 2023ರ ಸೆ.7ರಂದು ಬೆಂಗಳೂರಿನ ಕೋರ್ಟ್‌ನಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಅದನ್ನು ರದ್ದುಗೊಳಿಸುವಂತೆ ಕೋರಿ ಸುನಿಲ್ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಜನಪ್ರತಿನಿಧಿಗಳ ಕೋರ್ಟ್ ಪ್ರಮೋದ್ ಮುತಾಲಿಕ್ ದಾಖಲಿಸಿದ್ದ ಪ್ರಕರಣವನ್ನು ಖುಲಾಸೆಗೊಳಿಸಿದೆ. ಇದರಲ್ಲಿ ಮಾನನಷ್ಟವಾಗುವಂಥ ಯಾವುದೇ ವಿಚಾರಗಳಿಲ್ಲ ಎಂದು ಹೇಳಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page