
ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯ ಹಾಗೂ ಜಿಲ್ಲಾಮಟ್ಟದ ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಸ್ತು ತರುವ ಸಲುವಾಗಿ ವೇದಿಕೆ ಮೇಲೆ ಆಸೀನರಾಗುವ ಅತಿಥಿಗಳಿಗೆ ಕಡಿವಾಣ ವಿಧಿಸಲು ತೀರ್ಮಾನಿಸಿದ್ದು, ಸರ್ಕಾರಿ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಗಳಲ್ಲಿನ ಅತಿಥಿಗಳ ಹೆಸರನ್ನು 9ಕ್ಕೆ ಸೀಮಿತಗೊಳಿಸಲು ಸೂಚನೆ ನೀಡಿದ್ದು ಜೊತೆಗೆ ತೀರಾ ಅನಿವಾರ್ಯವಾದರೆ ಮಾತ್ರ 13 ಮಂದಿ ಅತಿಥಿಗಳವರೆಗೆ ಅವಕಾಶ ನೀಡಬಹುದು ಎಂದು ತಿಳಿಸಿದೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ್ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈ ಶಿಷ್ಟಾಚಾರ ನಿಯಮ ಪಾಲನೆ ಹಾಗೂ ಅತಿಥಿಗಳ ಸಂಖ್ಯೆ ನಿರ್ಧರಿಸುವ ಅಧಿಕಾರವನ್ನು ಹೊರಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.













