
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು, ಕಾರ್ಕಳ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ), ಕಾರ್ಕಳ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ 12 ಸೆಪ್ಟೆಂಬರ್ 2025 ರಂದು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ”ವನ್ನು ಆಯೋಜಿಸಲಾಯಿತು.
ಉದ್ಘಾಟಕರಾಗಿ ಆಗಮಿಸಿದ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಸಂತೋಷ್ ಶೆಟ್ಟಿ ಇವರು ಮಾತನಾಡಿ ‘ಸಮಾಜದ ಪ್ರಗತಿ ಆರೋಗ್ಯದ ಹಾದಿಯಲ್ಲಿ ಅಡಗಿದ, ಆರೋಗ್ಯದ ಅರಿವು ಬೆಳೆಯಲು ಜಾಗೃತಿ ಅತ್ಯವಶ್ಯಕ ‘ ಎಂದು ಕಿವಿಮಾತುಗಳನ್ನು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕ, ಪ್ರಾದೇಶಿಕ ಕಛೇರಿ, ಉಡುಪಿಯ ಯೋಜನಾಧಿಕಾರಿಗಳಾದ ಗಣೇಶ್ ಆಚಾರ್ಯರವರು ‘ ಆರೋಗ್ಯದ ಅರಿವು ಬೆಳಗಿದಾಗ ಮಾತ್ರ ಸಮಾಜ ಶ್ರೇಯೋಭಿವೃದ್ಧಿಯ ಹಾದಿ ಹಿಡಿಯುತ್ತದೆ ‘ ಎಂಬ ಸತ್ಯವಾಕ್ಯವನ್ನು ತಮ್ಮ ನಿರರ್ಗಳ ನುಡಿಗಳೊಂದಿಗೆ ತಿಳಿಸಿಕೊಟ್ಟರು. ಅಲ್ಲದೇ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಡಾ. ಬಿ ಗಣನಾಥ ಶೆಟ್ಟಿ ರವರು ‘ ಜಾಗೃತಿಯ ಬೆಳಕು ಮೂಡಿದಾಗಲೇ ಸಮಾಜ ಆರೋಗ್ಯ, ಅರಿವು ಮತ್ತು ಪ್ರಗತಿಯನ್ನು ಕಾಣುತ್ತದೆ’ ಎಂಬುದಾಗಿ ಹಲವು ಅಮೂಲ್ಯ ವಿಚಾರಗಳನ್ನು ಅಧ್ಯಕ್ಷೀಯ ನುಡಿಗಳೊಂದಿಗೆ ಹಂಚಿಕೊಂಡರು.













