
ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿಗಾಗಿ ಪಟ್ಟಿ ಮಾಡಿದ ಜಾತಿಗಳ ಯಾದಿಯಲ್ಲಿ ಹಿಂದು ಉಪಜಾತಿಗಳ ಜತೆಗೆ ಮತಾಂತರಗೊಂಡ ಕ್ರಿಶ್ಚಿಯನ್ ರನ್ನು ಸೇರಿಸಲಾಗಿತ್ತು. ಒಟ್ಟು 46 ಇಂಥ ಹೊಸ ಜಾತಿಗಳ ಸೃಷ್ಟಿ ಕಾಯಕ ಸಮುದಾಯಗಳ ಮತಾಂತರ ಕ್ಕೆ ಇಂಬು ನೀಡುವ ಜತೆಗೆ ಭವಿಷ್ಯದಲ್ಲಿ ಮೀಸಲು ವ್ಯವಸ್ಥೆಯನ್ನು ಛಿದ್ರಗೊಳಿಸುವ ಅಪಾಯವಿತ್ತು.
ಈ ಹಿನ್ನೆಲೆಯಲ್ಲಿ ನಾವು ನಡೆಸಿದ ಹೋರಾಟಕ್ಕೆ ಆಯೋಗ ಮಣಿದಿದೆ. ಎರಡು ದಿನಗಳ ಹಿಂದೆ 33 ಜಾತಿಗಳನ್ನು ಈ ಪಟ್ಟಿಯಿಂದ ಕೈ ಬಿಟ್ಟ ಆಯೋಗ ಈಗ ಪರಿಶಿಷ್ಟ ಜಾತಿಗಳಲ್ಲಿ ಸೇರ್ಪಡೆಯಾಗಿದ್ದ 14 ಜಾತಿಗಳನ್ನು ಕೈ ಬಿಟ್ಟಿದೆ. ಒಟ್ಟಾರೆಯಾಗಿ ನಮ್ಮ ಹೋರಾಟಕ್ಕೆ ಜಯ ದೊರೆತಿದ್ದು, ಇನ್ನಾದರೂ ಯಾವುದೇ ಅಪಸವ್ಯವಿಲ್ಲದೇ ಆಯೋಗ ಸಮೀಕ್ಷೆ ನಡೆಸಲಿ. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಲಿ ಎಂದು ಮಾಜಿ ಸಚಿವರು ಶಾಸಕರಾದ ವಿ ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






















































