
ಮಂಗಳೂರು: -ಮಠದಕಣಿ ಶ್ರೀ ವೀರಭದ್ರ – ಮಹಾಮಾಯಿ ದೇವಸ್ಥಾನದ ನವರಾತ್ರಿ ಮಹೋತ್ಸವದಲ್ಲಿ ಮಹಾಮಾಯಿ ಫ್ರೆಂಡ್ಸ್ ಎಸೋಸಿಯೇಶನ್ 48ನೇ ವಾರ್ಷಿಕೋತ್ಸವದ ಪ್ರಯುಕ್ತ ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ಬುಧವಾರ (24-9-2025) ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು .
ಎಲ್ಲರ ಮೆಚ್ಚುಗೆ ಪಡೆಯಿತು.
ನಂತರ ನಡೆದ ಸಭಾ ಕಾರ್ಯಕ್ರಮ ದಲ್ಲಿ
ಮಖ್ಯ ಅಥಿತಿಗಳಾಗಿ ಮಕ್ಕಳ ಕಲ್ಯಾಣ ಸಮಿತಿ ದ.ಕ ಜಿಲ್ಲಾ ಅಧ್ಯಕ್ಷೆ ಹಾಗೂ ವಕೀಲರಾದ ಡಾ. ಅಕ್ಷತಾ ಆದರ್ಶ್ ಮೂಡುಬಿದಿರೆ ಮತ್ತು ಸಂಪತ್ ಜೈನ್ ಮುಂಡೂರು, ಬಾಲಕೃಷ್ಣ ಕಲ್ಬಾವಿ, ವಿಶ್ವನಾಥ್ ಶೆಟ್ಟಿಗಾರ , ಸುದೇಶ್ ಜೈನ್ ಮಕ್ಕಿಮನೆ ಮೊದಲಾದವರು ಉಪಸ್ಥಿತರಿದ್ದರು,
ಈ ಸಂದರ್ಭದಲ್ಲಿ ನೃತ್ಯ ನಿರ್ದೇಶಕರುಗಳಾದ ರೀಮಾ ಜಗನ್ನಾಥ್ ಮಾರ್ನಮಿಕಟ್ಟೆ , ವಿದುಷಿ ಪ್ರಾರ್ಥನಾ ರೋಹಿತ್ ಹೊಸಬೆಟ್ಟು , ವಂಸತ್ ಕುಮಾರ್, ಆಶಿಶ್ ಅಂಚನ್, ಹರೀಶ್ ಆಚಾರ್ಯ ಅವರನ್ನು ಸನ್ಮಾನಿಸಿಗೌರವಿಸಲಾಯಿತು .
ಪ್ರಿಯಾ ಸುದೇಶ್ ಕುಮಾರ್ ಮಂಗಳೂರು ನಿರೂಪಿಸಿದರು.
ಗೌರವ್ ಶೆಟ್ಟಿಗಾರ, ಉಷಾ ಅಶೋಕ್, ಧಾತ್ರಿ,
ಕೃತಿ ಸನಿಲ್, ಪ್ರೇರಣ ಜೆ,ಅಪೇಕ್ಷಾ ಎ , ಮೊದಲಾದವರು ಸಹಕರಿಸಿದರು.






















































