
ಕಾರ್ಕಳದ ಖ್ಯಾತ, ಹಿರಿಯ ನ್ಯಾಯವಾದಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಂ.ಕೆ. ವಿಜಯ ಕುಮಾರ್ ರವರ ನಿಧನಕ್ಕೆ, ಕಾರ್ಕಳ ನ್ಯಾಯಾಲಯದ ನ್ಯಾಯಾಧೀಶರ ಸಮ್ಮುಖದಲ್ಲಿ ಕಾರ್ಕಳ ವಕೀಲರ ಸಂಘದ ಸರ್ವ ಸದಸ್ಯರು ಸೇರಿ, ಮೃತರ ಆತ್ಮಕ್ಕೆ ಶಾಂತಿ ಕೋರಿ ಮೌನ ಪ್ರಾರ್ಥನೆಯನ್ನು ಸಲ್ಲಿಸಿದರು ಹಾಗು ಮೃತರ ಬಗ್ಗೆ ಮಾನ್ಯ ನ್ಯಾಯಾಧೀಶರು, ಸಂಘದ ಪದಾಧಿಕಾರಿಗಳು, ಸರ್ವ ಸದಸ್ಯರು, ತೀವ್ರ ಸಂತಾಪವನ್ನು ವ್ಯಕ್ತಪಡಿಸಿ, ನ್ಯಾಯಾಂಗ ವ್ಯವಸ್ಥೆಗೆ ಅಗಾಧವಾದ ಸೇವೆಯನ್ನು ಸಲ್ಲಿಸಿ, ರಾಜಕೀಯ, ಕೃಷಿ ಹೀಗೆ ವಿವಿಧ ಕ್ಷೇತ್ರದಲ್ಲಿ ದಿಗ್ಗಜರೆನಿಸಿಕೊಂಡ ಶ್ರೀ ಎಂ.ಕೆ. ವಿಜಯ ಕುಮಾರ್ರವರ ನಿಧನವು, ಕಾರ್ಕಳ ವಕೀಲರ ಸಂಘಕ್ಕೆ ಹಾಗು ನ್ಯಾಯಾಂಗ ವ್ಯವಸ್ಥೆಗೆ ತುಂಬಲಾರದ ನಷ್ಟ ಉಂಟಾಗಿದೆಯೆಂದು ಸಂತಾಪವನ್ನು ವ್ಯಕ್ತಪಡಿಸಿದರು.






















































