
ಬೆಂಗಳೂರು: ಕಾಂತಾರ ಚಾಪ್ಟರ್-1 ಸಿನಿಮಾ ಯಶಸ್ವಿ ಕಾಣುತ್ತಿದ್ದರೂ ಈ ಸಿನಿಮಾ ನೋಡಿ ದೈವದ ಅನುಕರಣೆ ಮಾಡಿ ಹುಚ್ಚಾಟ ಮಾಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದೇ ತಲೆ ನೋವಾಗಿದೆ. ದೈವಾರಾಧನೆಯ ಎಳೆ ಹಿಡಿದು ನಿರ್ಮಿಸಿದ ಕಾಂತಾರ ಚಿತ್ರದ ವಿರುದ್ಧ ಇದೀಗ ದೈವಾರಾಧಕರೇ ಸಿಡಿದೆದ್ದಿದ್ದಾರೆ. ದೈವಸ್ಥಾನದ ಮೆಟ್ಟಿಲಲ್ಲೇ ತೀರ್ಪಿಗಾಗಿ ದೈವಾರಾಧಕರು ದೈವದ ಮೊರೆ ಹೋಗಿದ್ದಾರೆ.
ಈ ನಡುವೆ ಕಾಂತಾರ ಸಿನಿಮಾ ನೋಡಿದ ಬಳಿಕ ಮೆರೆದಿದ್ದ ವೆಂಕಟ್ ಎಂಬಾತ ವಿಡಿಯೋ ಮೂಲಕ ತುಳುನಾಡ ಜನತೆ ಹಾಗೂ ಕಾಂತಾರ ಚಿತ್ರತಂಡಕ್ಕೆ ಕ್ಷಮೆಯಾಚಿಸಿದ್ದಾನೆ. ಘಟನೆ ಬಳಿಕ ಮಾನಸಿಕವಾಗಿ ನೊಂದಿದ್ದೇನೆ. ತುಳುನಾಡಿನ ಜನತೆಯಲ್ಲಿ ಕ್ಷಮೆ ಇರಲಿ. ಈ ರೀತಿ ಯಾರೂ ಮಾಡಬೇಡಿ, ನಾನು ನಿಮ್ಮವ ಅಂತ ಕ್ಷಮಿಸಿಬಿಡಿ ಎಂದು ವಿಡಿಯೋದಲ್ಲಿ ಮನವಿ ಮಾಡಿಕೊಂಡಿದ್ದಾನೆ.






















































