
ಧಾರವಾಡ: ಕರ್ನಾಟಕ ಸರ್ಕಾರವು ಸರ್ಕಾರಿ ಆವರಣದಲ್ಲಿ ಖಾಸಗಿ ಸಂಸ್ಥೆಗಳು ತಮ್ಮ ಚಟುವಟಿಕೆಗಳನ್ನು ನಡೆಸುವ ಮೊದಲು ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂಬ ಆದೇಶ ಹೊರಡಿಸಿದ್ದು ಇದೀಗ ಮಂಗಳವಾರ ಧಾರವಾಡ ಹೈಕೋರ್ಟ್ ಪೀಠವು ಈ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಸರ್ಕಾರದ ಈ ನಿರ್ದೇಶನವನ್ನು ಪ್ರಶ್ನಿಸಿ, ಪುನಶ್ಚೈತನ್ಯ ಸೇವಾ ಸಂಸ್ಥೆಯು ಅರ್ಜಿ ಸಲ್ಲಿಸಿದ್ದು ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವು ಸರ್ಕಾರದ ನಿರ್ದೇಶನಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಮುಂದಿನ ವಿಚಾರಣೆಯನ್ನು ನವೆಂಬರ್ 17ಕ್ಕೆ ಮುಂದೂಡಿದೆ.



















































