
ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ ಅನ್ನು ಭಾರತದಲ್ಲಿ ನಿಷೇಧಿಸಬೇಕು ಎಂಬ ತಮ್ಮ ದೀರ್ಘಕಾಲದ ಬೇಡಿಕೆಯನ್ನು ಪುನರುಚ್ಚರಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಕೂಡ ಒಮ್ಮೆ ಸರ್ಕಾರಿ ನೌಕರರು ಆರ್ಎಸ್ಎಸ್ (RSS) ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಲು ಪತ್ರ ಬರೆದಿದ್ದರು ಎಂದು ಅವರು ವಾದಿಸಿದ್ದಾರೆ.
ಇದಕ್ಕೆ ತಿರುಗೇಟು ನೀಡಿದ ಬಿಜೆಪಿ ಕಾಂಗ್ರೆಸ್ ಬೂಟಾಟಿಕೆ ಮಾಡುತ್ತಿದೆ. ಕಾಂಗ್ರೆಸ್ ರಾಜಕೀಯ ಲಾಭಕ್ಕಾಗಿ ಸರ್ದಾರ್ ಪಟೇಲ್ ಹೆಸರನ್ನು ಬಳಸುತ್ತಿದೆ. ಕಾಂಗ್ರೆಸ್ ಹಲವು ದಶಕಗಳಿಂದ ಸರ್ದಾರ್ ಪಟೇಲ್ ಅವರ ಪರಂಪರೆಯನ್ನು ನಿರ್ಲಕ್ಷಿಸಿತ್ತು. ಈಗ ಆರ್ಎಸ್ಎಸ್ ಮೇಲೆ ದಾಳಿ ಮಾಡಲು ಸರ್ದಾರ್ ಪಟೇಲ್ ಹೆಸರನ್ನು ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ ಆರೋಪಿಸಿದ್ದಾರೆ.
“ಐಎನ್ಸಿ ಎಂದರೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಲ್ಲ. ಅದರರ್ಥ ಭಾರತೀಯ ನಾಜಿ ಕಾಂಗ್ರೆಸ್. ಅವರ ಎಲ್ಲಾ ಪಿತೂರಿಗಳ ಹೊರತಾಗಿಯೂ ನ್ಯಾಯಾಲಯವು ಆರ್ಎಸ್ಎಸ್ ಮೇಲಿನ ನಿಷೇಧವನ್ನು ತೆಗೆದುಹಾಕಿತು. ಆರ್ಎಸ್ಎಸ್ ರಾಜಕೀಯೇತರ ಸಂಘಟನೆಯಾಗಿದೆ. ಹೀಗಾಗಿ ಸರ್ಕಾರಿ ನೌಕರರು ಅವರ ಚಟುವಟಿಕೆಗಳಲ್ಲಿ ಭಾಗವಹಿಸಬಹುದು. ಆದರೆ ಕಾಂಗ್ರೆಸ್ ಎಷ್ಟು ಅಸಹಿಷ್ಣುತೆಯಿಂದ ಕೂಡಿದೆಯೆಂದರೆ ಅವರು ಪಿಎಫ್ಐ, ಎಸ್ಡಿಪಿಐ ಮತ್ತು ಎಂಐಎಂನ ಗಲಭೆಕೋರರಿಗೆ ಬೆಂಬಲ ನೀಡುತ್ತಾರೆ. ಆದರೆ ದೇಶದ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿರುವ ಆರ್ಎಸ್ಎಸ್ ವಿರುದ್ಧ ವಿಷವನ್ನು ಕಾರುತ್ತಾರೆ” ಎಂದು ಪೂನವಾಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.






















































