✨ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟನೆ, ವಾರ್ಷಿಕ ಪ್ರತಿಭಾ ದಿನಾಚರಣೆ ಹಾಗೂ ನವೀಕೃತ ಸೆಮಿನಾರ್ ಹಾಲ್ ಉದ್ಘಾಟನೆ

ಕಾರ್ಕಳ: ಮಂಜುನಾಥ ಪೈ ಮೆಮೋರಿಯಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟನೆ, ವಾರ್ಷಿಕ ಪ್ರತಿಭಾ ದಿನಾಚರಣೆ ಹಾಗೂ ನವೀಕೃತ ಸೆಮಿನಾರ್ ಹಾಲ್ ಉದ್ಘಾಟನಾ ಕಾರ್ಯಕ್ರಮವು ನವೆಂಬರ್ 7, 2025ರ ಶುಕ್ರವಾರ ಭವ್ಯವಾಗಿ ನಡೆಯಿತು.
ಕಾರ್ಯಕ್ರಮವನ್ನು ಸನ್ಮಾನ್ಯ ಶ್ರೀ ಸುನೀಲ್ ಕುಮಾರ್, ಮಾಜಿ ಸಚಿವರು, ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು ಉದ್ಘಾಟಿಸಿದರು. ದೀಪ ಪ್ರಜ್ವಾಲನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು ಮಾತನಾಡಿ, “ವಿದ್ಯಾರ್ಥಿಗಳು ಜೀವನದಲ್ಲಿ ಆಸಕ್ತಿ ಮತ್ತು ಆದ್ಯತೆಯನ್ನು ಗುರುತಿಸಿಕೊಂಡು ಕ್ರಮಬದ್ಧವಾಗಿ ಪ್ರಯತ್ನಿಸಿದರೆ ಯಶಸ್ಸು ಖಚಿತ” ಎಂದು ಹೇಳಿದರು. ಕಾಲೇಜಿನಲ್ಲಿ ಧನಾತ್ಮಕ ವಾತಾವರಣವಿದ್ದು, ಅದನ್ನು ಬಳಸಿಕೊಂಡು ವಿದ್ಯಾರ್ಥಿಗಳು ಸರ್ವತೋಮುಖ ಬೆಳವಣಿಗೆ ಸಾಧಿಸಬೇಕು ಎಂದು ಆಶಿಸಿದರು. ಇದೇ ಸಂದರ್ಭದಲ್ಲಿ ಅವರು ಕಾಲೇಜಿನಲ್ಲಿ ನೂತನ ಸಭಾಂಗಣ ನಿರ್ಮಾಣಕ್ಕಾಗಿ ₹25 ಲಕ್ಷ ಅನುದಾನ ನೀಡುವುದಾಗಿ ಘೋಷಿಸಿದರು.
ಕಾರ್ಯಕ್ರಮಕ್ಕೆ ಪ್ರೊ. ಕವಿತಾ ಕೆ.ಆರ್., ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಮಂಗಳೂರು ಪ್ರಾದೇಶಿಕ ಕಚೇರಿ ಇವರು ಮುಖ್ಯ ಅತಿತಿಗಳಾಗಿ ಆಗಮಿಸಿ, “ನಾಯಕತ್ವ ಎಂದರೆ ಎಲ್ಲರನ್ನೂ ಒಗ್ಗೂಡಿಸಿ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವ ಕಲೆ. ಈ ನಿಟ್ಟಿನಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ವೇಧಿಕೆ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿ” ಎಂದು ತಮ್ಮ ಸಂದೇಶದಲ್ಲಿ ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್ ರೈ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು. ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಪ್ರಕಾಶ್ ರಾವ್ ಮಾತನಾಡಿ ಸದಾಕಾಲ ತಾವು ಹಾಗೂ ಪೂರ್ವ ವಿದ್ಯಾರ್ಥಿಗಳು ಕಾಲೇಜಿನ ಅಭಿವೃದ್ಧಿ ಕಾರ್ಯಗಳ ಬೆಂಬಲಕ್ಕೆ ಇರುವುದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಸಂಚಾಲಕರಾದ ಡಾ. ಚಂದ್ರಾವತಿ, ಐ.ಕ್ಯೂ.ಎ.ಸಿ. ಸಂಚಾಲಕರಾದ ವಿನಯ್ ಎಂ.ಎಸ್., ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಜಯಭಾರತಿ, ಸಾಂಸ್ಕೃತಿಕ ಸಂಘದ ಸಂಚಾಲಕರಾದ ಸೌಮ್ಯ ಎಚ್. ಕೆ. ಸೇರಿದಂತೆ ಪೂರ್ವ ವಿದ್ಯಾರ್ಥಿಗಳು ಹಾಗು ಪೋಷಕರು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಅತಿಥಿಗಳು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.






























































































































