
ಶಬರಿಮಲೆ: ಶಬರಿಮಲೆ ಅಯ್ಯಪ್ಪ ದೇಗುಲದ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಇಂದಿನಿಂದ ಆರಂಭವಾಗಿದ್ದು ಮಧ್ಯರಾತ್ರಿ 3 ಗಂಟೆಯಿಂದ ಸಾವಿರಾರು ಭಕ್ತರು ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಆದರೆ ಈ ಯಾತ್ರೆಯ ಆರಂಭದ ನಡುವೆಯೇ, ಮೆದುಳು ತಿನ್ನುವ ಅಮೀಬಾ ಸೋಂಕಿನಿಂದ ಭಕ್ತರಲ್ಲಿ ಆತಂಕ ಸೃಷ್ಟಿಯಾಗಿದೆ.
ಈ ಸೋಂಕಿನ ಹಿನ್ನೆಲೆ ಕೇರಳ ಆರೋಗ್ಯ ಇಲಾಖೆ ಭಕ್ತರಿಗೆ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
- ನದಿಯಲ್ಲಿ ತೀರ್ಥಸ್ನಾನ ಮಾಡುವಾಗ ಮೂಗಿಗೆ ನೀರು ಹೋಗದಂತೆ ಎಚ್ಚರ ವಹಿಸಬೇಕು.
- ಕುಡಿಯಲು ಬಿಸಿ ನೀರನ್ನು ಬಳಸಬೇಕು ಮತ್ತು ಆಗಾಗ ಕೈಗಳನ್ನು ನೀರಿನಿಂದ ತೊಳೆದುಕೊಳ್ಳುಬೇಕು.
- ತೊಳೆದ ಹಣ್ಣುಗಳನ್ನು ಸೇವಿಸಲು ಸೂಚಿಸಲಾಗಿದೆ.
- ಬೆಟ್ಟ ಹತ್ತುವಾಗ ಆಗಾಗ ವಿಶ್ರಾಂತಿ ಪಡೆಯುವಂತೆ ಮತ್ತು ಶೌಚಾಲಯಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಲಾಗಿದೆ.






