21.2 C
Udupi
Thursday, December 18, 2025
spot_img
spot_img
HomeBlogಮಂಗಳೂರು: ಡಿ. 20 ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವಿಶೇಷ ಪ್ರಕಟಣೆ, ಡಾ. ಕೆ. ಚಿನ್ನಪ್ಪ...

ಮಂಗಳೂರು: ಡಿ. 20 ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವಿಶೇಷ ಪ್ರಕಟಣೆ, ಡಾ. ಕೆ. ಚಿನ್ನಪ್ಪ ಗೌಡ ರವರ

“ಭೂತಾರಾಧನೆ” – ಮಾಯದ ನಡೆ ಜೋಗದ ನುಡಿ” ಕೃತಿ ಬಿಡುಗಡೆ ಸಮಾರಂಭ

2025ರ ಡಿಸೆಂಬರ್ 20ರಂದು ಕ್ರಿಯೇಟಿವ್ ಪುಸ್ತಕ ಮನೆ, ಕಾರ್ಕಳ ಮತ್ತು ಕನ್ನಡ ವಿಭಾಗ, ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಖ್ಯಾತ ಬರಹಗಾರ ಡಾ. ಕೆ. ಚಿನ್ನಪ್ಪ ಗೌಡರ ಸಂಶೋಧನಾ ಕೃತಿ “ಭೂತಾರಾಧನೆ – ಮಾಯದ ನಡೆ ಜೋಗದ ನುಡಿ” ಯ ಬಿಡುಗಡೆ ಸಮಾರಂಭ ನಡೆಯಲಿದೆ.

ಈ ಕಾರ್ಯಕ್ರಮವು ಸಂಜೆ 3.00 ಗಂಟೆಗೆ ಮಂಗಳೂರಿನ ಎಲ್ಎಫ್ ರಸ್ಕಿನ್ಹ ಸಭಾಂಗಣ, ಎಲ್ ಸಿ ಆರ್ ಐ ಬ್ಲಾಕ್, ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದೆ. ಡಾ. ಬಿ.ಎ. ವಿವೇಕ ರೈ ಅವರು ಕೃತಿ ಅನಾವರಣ ಮಾಡಲಿದ್ದು ಡಾ. ರಾಜಶೇಖರ್ ಹಳೆಮನೆ ಕೃತಿ ಅವಲೋಕನ ಮಾಡಲಿದ್ದಾರೆ. ಶ್ರೀ ಅಶ್ವತ್ ಎಸ್. ಎಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಡಾ. ಪ್ರವೀಣ್ ಮಾರ್ಟೀಸ್ ಎಸ್. ಜೆ, ಡಾ. ನಾಗಪ್ಪ ಗೌಡ ಆರ್., ಡಾ. ಕೆ. ಚಿನ್ನಪ್ಪ ಗೌಡ ಹಾಗೂ ಇತರ ಗಣ್ಯರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶ್ರೀ ಶೇಖರ ಪರವ ಅವರಿಗೆ ಗೌರವ ಸನ್ಮಾನ ನಡೆಯಲಿದೆ.

ಸಾಹಿತ್ಯ, ಸಂಸ್ಕೃತಿ ಹಾಗೂ ಜನಪದ ಅಧ್ಯಯನದಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಹ್ವಾನಿಸಲಾಗಿದೆ.

spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page