ಕಾರ್ಕಳ ಜ್ಞಾನಸುಧ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ: ಶ್ರೀಮದ್ಭುವನೇಂದ್ರ ಶಾಲೆ ಕಾರ್ಕಳದಲ್ಲಿ ರಾಮಕೃಷ್ಣ ವಿವೇಕಾನಂದ ಭಾವ ಪ್ರಚಾರ ಪರಿಷತ್, ಕರ್ನಾಟಕ ಇವರು ಆಯೋಜಿಸಿದ್ದ “ವಿವೇಕ ವಿದ್ಯಾರ್ಥಿ” ಎನ್ನುವ ರಾಜ್ಯಮಟ್ಟದ ವ್ಯಕ್ತಿತ್ವ ನಿರ್ಮಾಣ ಲಿಖಿತ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಾದ 8ನೇ ತರಗತಿಯ ಸಾನ್ವಿ , 9ನೇ ತರಗತಿಯ ತನ್ವಿ,10ನೇ ತರಗತಿಯ ವೈಷ್ಣವಿ ಶೆಟ್ಟಿಗಾರ್ ಇವರು ಭಾಗವಹಿಸಿ ತಾಲ್ಲೂಕು ಮಟ್ಟದಲ್ಲಿ ಮೊದಲನೇ ಸ್ಥಾನ ಪಡೆದಿರುತ್ತಾರೆ.
ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.





