ಕಾಂಗ್ರೆಸ್ ನಾಯಕ, ಉದಯ ಶೆಟ್ಟಿ ಮುನಿಯಾಲು ಸಂತಾಪ

ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿಯಾಗಿ ಕರ್ತವ್ಯದಲ್ಲಿದ್ದ “ನಾಸೀರ್ ಹುಸೇನ್” ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು, ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿಯೂ ಕರ್ತವ್ಯ ನಿರ್ವಹಿಸಿದ್ದ ಇವರು ಬದ್ದತೆ ಮತ್ತು ಕರ್ತವ್ಯನಿಷ್ಠೆಗೆ ಹೆಸರಾಗಿದ್ದ ದಕ್ಷ ಅಧಿಕಾರಿಯಾಗಿದ್ದರು. ಅಗಲಿದ ಆತ್ಮಕ್ಕೆ ಭಾವಪೂರ್ಣ ಶ್ರದ್ದಾಂಜಲಿಯನ್ನು ಅರ್ಪಿಸುತ್ತೇನೆ, ಹಾಗೂ ಅವರ ಕುಟುಂಬ ವರ್ಗಕ್ಕೆ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ಮುನಿಯಾಲು ಉದಯಶೆಟ್ಟಿ ಸಂತಾಪ ಸೂಚಿಸಿದ್ದಾರೆ.






