
ರಾಜ್ಯದಲ್ಲಿ ಹಲವು ದಿನಗಳಿಂದ ಒಣಹವೆ ವಾತಾವರಣವಿದ್ದು, ಇಂದು ಕೂಡ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಉತ್ತರ ಒಳ ನಾಡಿನಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನಲ್ಲಿ ಶುಷ್ಕ ವಾತಾವರಣವಿರಲಿದೆ.
ಬೆಂಗಳೂರು ನಗರದಲ್ಲೂ ಚಳಿಯ ವಾತಾವರಣವಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ವೈದ್ಯರು ಸೂಚಿಸಿದ್ದಾರೆ.
ಉತ್ತರ ಒಳನಾಡು ಭಾಗದ, ಬೆಳಗಾವಿ, ಬೀದರ್, ವಿಜಯಪುರ ,ಬಾಗಲಕೋಟೆ ,ಹಾವೇರಿ ,ಗದಗ ,ಧಾರವಾಡ ಕಲಬುರಗಿ ಜಿಲ್ಲೆಗಳಲ್ಲಿ ಒಣಹವೆ ವಾತಾವರಣವಿರಲಿದೆ.



















